ಮೈಸೂರು: ಇಂದು ಮೈಸೂರು ನಗರ ಬಿಜೆಪಿ ಯುವ ಮೋರ್ಚಾ ತಂಡವು ಪಕ್ಷದ ಕಚೇರಿಯ ಮುಂಭಾಗ ವಿವಿಧ ಭಂಗಿಯ ಬೃಹತ್ ಯೋಗಾಸನ ಮಾಡುವ ಮುಖಾಂತರ ಅರ್ಥಪೂರ್ಣ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಯೋಗಾಸನ ಕುರಿತು ಮಾತನಾಡಿದ ಮಾಜಿ ಸಚಿವರಾದ ಎನ್. ಮಹೇಶ್ ರವರು ಯೋಗಾಸನ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು ಪ್ರತಿದಿನ ಪ್ರತಿಯೊಬ್ಬರು ತಮ್ಮ ಮನೆಯಲ್ಲಿ ಯೋಗಾಸನವನ್ನು ಮಾಡಿದರೆ ನಮ್ಮ ದೈನಂದಿನ ಜೀವನ ಬಹಳ ಉಲ್ಲಾಸಕರವಾಗಿರುತ್ತದೆ ಮನೆಯಲ್ಲಿ ಹಿರಿಯರು, ವೃದ್ಧರು, ಮಕ್ಕಳು, ಯುವಕರು, ಯುವತಿಯರು, ಯೋಗಭ್ಯಾಸ ಮಾಡಲೇಬೇಕು ಇದರಿಂದ ಆರೋಗ್ಯ ಹಾಗೂ ದೇಹದ ನರನಾಡಿಗಳು ಬಹಳ ಉತ್ತಮಕಾರಿಯಾಗಿ ಸಹಕರಿಸುತ್ತದೆ ಎಂದು ತಿಳಿಸಿದರು
ಬಳಿಕ ಮಾತನಾಡಿದ ಮಾಜಿ ಶಾಸಕ ನಿರಂಜನ್ ಕುಮಾರ್ ನಿಜಕ್ಕೂ ದೇಶಾದ್ಯಂತ ಇಂದು ನಡೆಯುತ್ತಿರುವ ವಿಶ್ವ ಯೋಗಾ ದಿನಾಚರಣೆ ಶ್ಲಾಘನೀಯ, ಭಾರತವು ಇಡೀ ಪ್ರಪಂಚಕ್ಕೆ ಯೋಗವನ್ನು ತೋರಿಸಿ ಕೊಡುವ ಮುಖಾಂತರ ಭಾರತ ವಿಶ್ವ ಗುರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುತ್ತದೆ, ದೇಶದ ಪ್ರಧಾನಿ ನರೇಂದ್ರ ಮೋದಿಜಿ ರವರು ಯೋಗವನ್ನು ಮಾಡುವ ಮುಖಾಂತರ ಜಗತ್ತಿನ ಪ್ರತಿಯೊಬ್ಬರ ಗಮನ ಸೆಳೆದಿದ್ದಾರೆ ಜೊತೆಗೆ ಆರೋಗ್ಯಕರ ಭಾರತ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ತಿಳಿಸಿದರು
ಮೈಸೂರು ಜಿಲ್ಲಾಧ್ಯಕ್ಷ ಎಲ್.ಆರ್ ಮಹದೇವಸ್ವಾಮಿ,ಯೋಗ ಶಿಕ್ಷಕರಾದ ಮುತ್ತಣ್ಣ ಬಿಡಣಾಳು , ಮೈಸೂರು ನಗರದ ಯುವಮೊರ್ಚಾ ಅಧ್ಯಕ್ಷ ರಾಕೇಶ್ ಗೌಡ, ನಗರ ಉಪಾಧ್ಯಕ್ಷ ಜೋಗಿ ಮಂಜು, ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಚ್ಚಿನ್, ಲೋಹಿತ್, ಮಧು, ನಿಶಾಂತ್, ಅರ್ಜನ್, ದೇವರಾಜ್, ಗಜೇಂದ್ರ, ರಂಗಸ್ವಾಮಿ, ಮುಂತಾದವರು ಉಪಸ್ಥಿತರಿದ್ದರು
ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…
ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…
ಬಿಆರ್ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…
ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…
‘ಆಂದೋಲನ’ ತಂಡದಿಂದ ರಿಯಾಲಿಟಿ ಚೆಕ್ ಮೈಸೂರು: ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ತಾಪ ಏರುತ್ತಿದ್ದಂತೆ, ದಾಹ ತಣಿಸಿಕೊಳ್ಳಲು ಜನರು…