ಮೈಸೂರು: ಇಂದು ಮೈಸೂರು ನಗರ ಬಿಜೆಪಿ ಯುವ ಮೋರ್ಚಾ ತಂಡವು ಪಕ್ಷದ ಕಚೇರಿಯ ಮುಂಭಾಗ ವಿವಿಧ ಭಂಗಿಯ ಬೃಹತ್ ಯೋಗಾಸನ ಮಾಡುವ ಮುಖಾಂತರ ಅರ್ಥಪೂರ್ಣ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಯೋಗಾಸನ ಕುರಿತು ಮಾತನಾಡಿದ ಮಾಜಿ ಸಚಿವರಾದ ಎನ್. ಮಹೇಶ್ ರವರು ಯೋಗಾಸನ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು ಪ್ರತಿದಿನ ಪ್ರತಿಯೊಬ್ಬರು ತಮ್ಮ ಮನೆಯಲ್ಲಿ ಯೋಗಾಸನವನ್ನು ಮಾಡಿದರೆ ನಮ್ಮ ದೈನಂದಿನ ಜೀವನ ಬಹಳ ಉಲ್ಲಾಸಕರವಾಗಿರುತ್ತದೆ ಮನೆಯಲ್ಲಿ ಹಿರಿಯರು, ವೃದ್ಧರು, ಮಕ್ಕಳು, ಯುವಕರು, ಯುವತಿಯರು, ಯೋಗಭ್ಯಾಸ ಮಾಡಲೇಬೇಕು ಇದರಿಂದ ಆರೋಗ್ಯ ಹಾಗೂ ದೇಹದ ನರನಾಡಿಗಳು ಬಹಳ ಉತ್ತಮಕಾರಿಯಾಗಿ ಸಹಕರಿಸುತ್ತದೆ ಎಂದು ತಿಳಿಸಿದರು
ಬಳಿಕ ಮಾತನಾಡಿದ ಮಾಜಿ ಶಾಸಕ ನಿರಂಜನ್ ಕುಮಾರ್ ನಿಜಕ್ಕೂ ದೇಶಾದ್ಯಂತ ಇಂದು ನಡೆಯುತ್ತಿರುವ ವಿಶ್ವ ಯೋಗಾ ದಿನಾಚರಣೆ ಶ್ಲಾಘನೀಯ, ಭಾರತವು ಇಡೀ ಪ್ರಪಂಚಕ್ಕೆ ಯೋಗವನ್ನು ತೋರಿಸಿ ಕೊಡುವ ಮುಖಾಂತರ ಭಾರತ ವಿಶ್ವ ಗುರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುತ್ತದೆ, ದೇಶದ ಪ್ರಧಾನಿ ನರೇಂದ್ರ ಮೋದಿಜಿ ರವರು ಯೋಗವನ್ನು ಮಾಡುವ ಮುಖಾಂತರ ಜಗತ್ತಿನ ಪ್ರತಿಯೊಬ್ಬರ ಗಮನ ಸೆಳೆದಿದ್ದಾರೆ ಜೊತೆಗೆ ಆರೋಗ್ಯಕರ ಭಾರತ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ತಿಳಿಸಿದರು
ಮೈಸೂರು ಜಿಲ್ಲಾಧ್ಯಕ್ಷ ಎಲ್.ಆರ್ ಮಹದೇವಸ್ವಾಮಿ,ಯೋಗ ಶಿಕ್ಷಕರಾದ ಮುತ್ತಣ್ಣ ಬಿಡಣಾಳು , ಮೈಸೂರು ನಗರದ ಯುವಮೊರ್ಚಾ ಅಧ್ಯಕ್ಷ ರಾಕೇಶ್ ಗೌಡ, ನಗರ ಉಪಾಧ್ಯಕ್ಷ ಜೋಗಿ ಮಂಜು, ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಚ್ಚಿನ್, ಲೋಹಿತ್, ಮಧು, ನಿಶಾಂತ್, ಅರ್ಜನ್, ದೇವರಾಜ್, ಗಜೇಂದ್ರ, ರಂಗಸ್ವಾಮಿ, ಮುಂತಾದವರು ಉಪಸ್ಥಿತರಿದ್ದರು
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…