ಮೈಸೂರು

ಅಹಂ ನಿಂದ ಸ್ವಯಂ ಕಡೆಗೆ ಹೋಗುವ ಮಾರ್ಗವೇ ಯೋಗ: ಮಾಜಿ ಸಚಿವ ಎನ್.ಮಹೇಶ್

ಮೈಸೂರು: ಇಂದು ಮೈಸೂರು ನಗರ ಬಿಜೆಪಿ ಯುವ ಮೋರ್ಚಾ ತಂಡವು ಪಕ್ಷದ ಕಚೇರಿಯ ಮುಂಭಾಗ ವಿವಿಧ ಭಂಗಿಯ ಬೃಹತ್ ಯೋಗಾಸನ ಮಾಡುವ ಮುಖಾಂತರ ಅರ್ಥಪೂರ್ಣ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಯೋಗಾಸನ ಕುರಿತು ಮಾತನಾಡಿದ ಮಾಜಿ ಸಚಿವರಾದ ಎನ್. ಮಹೇಶ್ ರವರು ಯೋಗಾಸನ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು ಪ್ರತಿದಿನ ಪ್ರತಿಯೊಬ್ಬರು ತಮ್ಮ ಮನೆಯಲ್ಲಿ ಯೋಗಾಸನವನ್ನು ಮಾಡಿದರೆ ನಮ್ಮ ದೈನಂದಿನ ಜೀವನ ಬಹಳ ಉಲ್ಲಾಸಕರವಾಗಿರುತ್ತದೆ ಮನೆಯಲ್ಲಿ ಹಿರಿಯರು, ವೃದ್ಧರು, ಮಕ್ಕಳು, ಯುವಕರು, ಯುವತಿಯರು, ಯೋಗಭ್ಯಾಸ ಮಾಡಲೇಬೇಕು ಇದರಿಂದ ಆರೋಗ್ಯ ಹಾಗೂ ದೇಹದ ನರನಾಡಿಗಳು ಬಹಳ ಉತ್ತಮಕಾರಿಯಾಗಿ ಸಹಕರಿಸುತ್ತದೆ ಎಂದು ತಿಳಿಸಿದರು

ಬಳಿಕ ಮಾತನಾಡಿದ ಮಾಜಿ ಶಾಸಕ ನಿರಂಜನ್ ಕುಮಾರ್ ನಿಜಕ್ಕೂ ದೇಶಾದ್ಯಂತ ಇಂದು ನಡೆಯುತ್ತಿರುವ ವಿಶ್ವ ಯೋಗಾ ದಿನಾಚರಣೆ ಶ್ಲಾಘನೀಯ, ಭಾರತವು ಇಡೀ ಪ್ರಪಂಚಕ್ಕೆ ಯೋಗವನ್ನು ತೋರಿಸಿ ಕೊಡುವ ಮುಖಾಂತರ ಭಾರತ ವಿಶ್ವ ಗುರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುತ್ತದೆ, ದೇಶದ ಪ್ರಧಾನಿ ನರೇಂದ್ರ ಮೋದಿಜಿ ರವರು ಯೋಗವನ್ನು ಮಾಡುವ ಮುಖಾಂತರ ಜಗತ್ತಿನ ಪ್ರತಿಯೊಬ್ಬರ ಗಮನ ಸೆಳೆದಿದ್ದಾರೆ ಜೊತೆಗೆ ಆರೋಗ್ಯಕರ ಭಾರತ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ತಿಳಿಸಿದರು

ಮೈಸೂರು ಜಿಲ್ಲಾಧ್ಯಕ್ಷ ಎಲ್.ಆರ್ ಮಹದೇವಸ್ವಾಮಿ,ಯೋಗ ಶಿಕ್ಷಕರಾದ ಮುತ್ತಣ್ಣ ಬಿಡಣಾಳು , ಮೈಸೂರು ನಗರದ ಯುವಮೊರ್ಚಾ ಅಧ್ಯಕ್ಷ ರಾಕೇಶ್ ಗೌಡ, ನಗರ ಉಪಾಧ್ಯಕ್ಷ ಜೋಗಿ ಮಂಜು, ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಚ್ಚಿನ್, ಲೋಹಿತ್, ಮಧು, ನಿಶಾಂತ್, ಅರ್ಜನ್, ದೇವರಾಜ್, ಗಜೇಂದ್ರ, ರಂಗಸ್ವಾಮಿ, ಮುಂತಾದವರು ಉಪಸ್ಥಿತರಿದ್ದರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಂಡಿ ಮಾರುಕಟ್ಟೆ : ಹೊರಗೆ ಥಳುಕು-ಒಳಗೆ ಹುಳುಕು

ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 14 ಗುರುವಾರ

3 hours ago

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್‌

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…

16 hours ago

ಹನೂರು: ಶ್ರೀರಂಗನಾಥಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಅನುಮತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…

17 hours ago

ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾಗಾಂಧಿ ಮನೆಗೆ ವಾಪಸ್‌

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…

17 hours ago

ಇನ್ನೊಂದು ವಾರದೊಳಗೆ ನೀಟ್-ಯುಜಿ ಪರೀಕ್ಷೆ ದಿನಾಂಕ ಘೋಷಣೆ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…

17 hours ago