ಮೈಸೂರು

ನಾಡಹಬ್ಬ ದಸರಾ: ಅ.9ರಂದು ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನ ಜೋಡಣೆ

ಮೈಸೂರು : ಈ ಬಾರಿ ದಸರಾದಲ್ಲಿ ರಾಜ ವಂಶಸ್ಥರ ಶರನ್ನವರಾತ್ರಿ ಪೂಜಾ ಕೈಂಕರ್ಯಗಳ ವಿವರಗಳು ನಿಗದಿಯಾಗಿದೆ. ಅದರಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ, ಖಾಸಗಿ ದರ್ಬಾರ್, ಅರಮನೆಯಲ್ಲಿ ಆಯುಧ ಪೂಜೆ ಹಾಗೂ ವಿಜಯದಶಮಿ ದಿನದಂದು ರಾಜವಂಶಸ್ಥ ಯಧುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ನಡೆಸುವ ರಾಜ ಪರಂಪರೆಯ ಶರನ್ನವರಾತ್ರಿಯ ಪೂಜಾ ವಿವರಗಳ ಮಾಹಿತಿ ಇಲ್ಲಿದೆ.

ಅ. 9ರಂದು ರತ್ನ ಖಚಿತ ಸಿಂಹಾಸನ ಜೋಡಣೆ: ರಾಜ ಪರಂಪರೆಯ ಶರನ್ನವರಾತ್ರಿಯ ಪ್ರಮುಖ ಆಕರ್ಷಣೆಯಾದ ರತ್ನ ಖಚಿತ ಸಿಂಹಾಸನ ಜೋಡಣೆ ಅ. 9ರಂದು ಅರಮನೆಯ ದರ್ಬಾರ್ ಹಾಲ್​ನಲ್ಲಿ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ನೇತೃತ್ವದಲ್ಲಿ ಗೆಜ್ಜಗಳ್ಳಿಯ ನುರಿತ ಕೆಲಸಗಾರರಿಂದ ನಡೆಯಲಿದೆ.

ಅದಕ್ಕೂ ಮುನ್ನ ಅರಮನೆಯಲ್ಲಿ ಬೆಳಗ್ಗೆಯಿಂದಲೇ ನವಗ್ರಹ ಪೂಜೆ, ಹೋಮಹವನಗಳು ನಡೆಯಲಿವೆ. ಆನಂತರ ಅರಮನೆಯ ನೆಲ ಮಾಳಿಗೆಯ ಸ್ಟ್ರಾಂಗ್ ರೂಂನಲ್ಲಿರುವ ಬಿಡಿ ಬಿಡಿ ಭಾಗದ ರತ್ನ ಖಚಿತ ಸಿಂಹಾಸನವನ್ನು ದರ್ಬಾರ್ ಹಾಲ್​ಗೆ ತಂದು, 10.05ರಿಂದ 10.35ರ ಶುಭ ಲಗ್ನದಲ್ಲಿ ರತ್ನ ಖಚಿತ ಸಿಂಹಾಸನ ಜೋಡಣೆ ನಡೆಯಲಿದೆ. ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು ಅರಮನೆಗೆ ಆಗಮಿಸಲಿದ್ದು, ಅವುಗಳಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಅ. 15ರಂದು ಖಾಸಗಿ ದರ್ಬಾರ್: ಅರಮನೆಯ ರಾಜಪರಂಪರೆಯಂತೆ ಶರನ್ನವರಾತ್ರಿಯ ಮೊದಲ ದಿನ ಅ. 15ರಂದು ಅರಮನೆಯ ದರ್ಬಾರ್ ಹಾಲ್​ನಲ್ಲಿರುವ ರತ್ನ ಖಚಿತ ಸಿಂಹಾಸನಕ್ಕೆ ಅಂದು ಬೆಳಗ್ಗೆ 6 ಗಂಟೆಯಿಂದ 6.25ರ ಶುಭ ಮುಹೂರ್ತದಲ್ಲಿ ಸಿಂಹ ಜೋಡಣೆ ಮಾಡಲಾಗುತ್ತದೆ. ಆಗ ಆಸನ ಸಿಂಹಾಸನವಾಗುತ್ತದೆ.

ಬೆಳಗ್ಗೆ ಅರಮನೆಯ ಒಳಗೆ ಗಣಪತಿ ಹೋಮ, ನವಗ್ರಹ ಹೋಮ ಸೇರಿದಂತೆ ಧಾರ್ಮಿಕ ಕೈಂಕರ್ಯಗಳು ನಡೆಯಲಿವೆ. ಬೆಳಗ್ಗೆ 7.05ರಿಂದ 7.45ರ ಶುಭ ಲಗ್ನದಲ್ಲಿ ರಾಜ ವಂಶಸ್ಥ ಯಧುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಕಂಕಣ ಧಾರಣೆ ಮಾಡಿಕೊಳ್ಳುತ್ತಾರೆ. ಆ ಬಳಿಕ ಅ. 15ರ ಭಾನುವಾರ ಬೆಳಗ್ಗೆ 9.45ಕ್ಕೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸುವಿಗೆ ಪೂಜೆ ಸಲ್ಲಿಸಿದ ಬಳಿಕ, 11.30ರಿಂದ 11.50ಕ್ಕೆ ದರ್ಬಾರ್ ಹಾಲ್​ನಲ್ಲಿ ಸಿಂಹಾಸನಕ್ಕೆ ರಾಜ ಪರಂಪರೆಯಂತೆ ಪೂಜೆ ಸಲ್ಲಿಸಿ, ರಾಜ ವಂಶಸ್ಥರು ರತ್ನ ಖಚಿತ ಸಿಂಹಾಸನದಲ್ಲಿ ಕುಳಿತು ಖಾಸಗಿ ದರ್ಬಾರ್ ನಡೆಸಲಿದ್ದಾರೆ.

ನಿತ್ಯ ಸಂಜೆ ಶರನ್ನವರಾತ್ರಿ ದಿನಗಳಲ್ಲಿ ಖಾಸಗಿ ದರ್ಬಾರ್ ನಡೆಸಲಿದ್ದಾರೆ.

ಅ. 20ಕ್ಕೆ ಸರಸ್ವತಿ ಪೂಜೆ: ರಾಜ ವಂಶಸ್ಥರು ಬಳಸುತ್ತಿದ್ದ ವೀಣೆ, ಧರ್ಮ ಗ್ರಂಥಗಳನ್ನು ಶಾರದಾ ದೇವಿಯ ಫೋಟೋದ ಮುಂದೆ ಇಟ್ಟು ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸುತ್ತಾರೆ. ಬಳಿಕ ಅ. 21ರಂದು ಕಾಳರಾತ್ರಿ ಪೂಜೆ ಹಾಗೂ 22ರಂದು ದುರ್ಗಾಷ್ಠಮಿ ಪೂಜೆ ನೆರವೇರಲಿವೆ. ರಾಜ ವಂಶಸ್ಥರು ಈ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಲಿದ್ದಾರೆ.

ಅ. 23ರಂದು ಆಯುಧ ಪೂಜೆ: ಅರಮನೆ ಶರನ್ನವರಾತ್ರಿಯ ಪ್ರಮುಖ ಪೂಜೆ ಆಯುಧ ಪೂಜೆ. ಅಂದು ಬೆಳಗ್ಗೆ ಅರಮನೆಯಲ್ಲಿ ಚಂಡಿಕಾ ಹೋಮ ಪೂಜೆ ನಡೆಯಲಿದೆ. ಬೆಳಗ್ಗೆ 5.30ಕ್ಕೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು ಅರಮನೆಯ ಆನೆ ಬಾಗಿಲಿಗೆ ಆಗಮಿಸಿ, ಅರಮನೆಯಲ್ಲಿರುವ ಖಾಸಾ ಆಯುಧಗಳನ್ನು ಬೆಳಗ್ಗೆ 6.05ರಿಂದ 6.15ರವರೆಗಿನ ಸಮಯದಲ್ಲಿ ಅರಮನೆಯ ಕೋಡಿ ಸೋಮೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ, ಅಲ್ಲಿ ಖಾಸಾ ಆಯುಧಗಳನ್ನು ಸ್ವಚ್ಛಗೊಳಿಸಿ, ಕೋಡಿ ಸೋಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ವಾಪಸ್ ತರಲಾಗುವುದು. ನಂತರ 11.45ಕ್ಕೆ ಪುನಃ ಅರಮನೆಯ ಕಲ್ಯಾಣ ಮಂಟಪಕ್ಕೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು ಆಗಮಿಸಿದಾಗ ಅವುಗಳಿಗೆ ಪೂಜೆ ಸಲ್ಲಿಸಲಾಗುತ್ತದೆ.

ಇದಾದ ನಂತರ ಅ. 23ರ ಮಧ್ಯಾಹ್ನ 12.20ರಿಂದ ಯಧುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಆಯುಧ ಪೂಜಾ ಕಾರ್ಯಗಳನ್ನು ಆರಂಭಿಸಲಿದ್ದು, 12.45ರವರೆಗೆ ಆಯುಧಗಳಿಗೆ ಪೂಜೆ ಹಾಗೂ ಪಟ್ಟದ ಹಸು, ಪಟ್ಟದ ಕುದುರೆ, ಪಟ್ಟದ ಆನೆ, ಅರಮನೆಯ ಆನೆ ಹಾಗೂ ರಾಜರು ಉಪಯೋಗಿಸುವ ದುಬಾರಿ ಬೆಲೆಯ ಖಾಸಗಿ ಕಾರುಗಳಿಗೆ ಪೂಜೆ ಸಲ್ಲಿಸಲಿದ್ದಾರೆ. ಅದಾದ ಬಳಿಕ ಆಯುಧ ಪೂಜೆ ದಿನ ಸಂಜೆ ರತ್ನ ಖಚಿತ ಸಿಂಹಾಸನದಲ್ಲಿ ಖಾಸಗಿ ದರ್ಬಾರ್ ನಡೆಸುವ ರಾಜ ವಂಶಸ್ಥರು ಆನಂತರ ಅದೇ ದಿನ ರತ್ನ ಖಚಿತ ಸಿಂಹಾಸನದಿಂದ ಸಿಂಹ ಲಾಂಛನವನ್ನು ವಿಸರ್ಜನೆ ಮಾಡುತ್ತಾರೆ.

ಅ. 24ರ ಮಂಗಳವಾರ ವಿಜಯದಶಮಿ: ರಾಜ ಪರಂಪರೆಯಂತೆ ಅ. 24ರಂದು ಅರಮನೆಯ ಆನೆ ಬಾಗಿಲಿನಲ್ಲಿ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು ಕಲ್ಯಾಣ ಮಂಟಪಕ್ಕೆ ಆಗಮಿಸಲಿದೆ. ಅಲ್ಲಿಂದ ರಾಜರು ಬಳಸುತ್ತಿದ್ದ ಆಯುಧಗಳನ್ನು ಬೆಳ್ಳಿ ಪಲ್ಲಕ್ಕಿಯಲ್ಲಿ ಇಟ್ಟು, 11ರಿಂದ 11.40ರ ಶುಭ ಸಮಯದಲ್ಲಿ ವಿಜಯದಶಮಿ ಮೆರವಣಿಗೆ ಆನೆ ಬಾಗಿಲಿನಿಂದ ಅರಮನೆಯ ಒಳಗಡೆ ಇರುವ ಭುವನೇಶ್ವರಿ ದೇವಾಲಯದವರೆಗೆ ರಾಜ ವಂಶಸ್ಥರು ಮೆರವಣಿಗೆಯಲ್ಲಿ ಆಗಮಿಸಿ ದೇವಾಲಯದ ಆವರಣದಲ್ಲಿರುವ ಶಮಿ ವೃಕ್ಷಕ್ಕೆ ಪೂಜೆ ಸಲ್ಲಿಸಿ ಅರಮನೆಗೆ ವಾಪಸ್ ಆಗಲಿದ್ದಾರೆ. ಅಲ್ಲಿಗೆ ರಾಜ ವಂಶಸ್ಥರ ಶರನ್ನವರಾತ್ರಿಯ ಸಾಂಪ್ರದಾಯಿಕ ಪೂಜೆ ಕೊನೆಗೊಳ್ಳಲಿದೆ. ಆನಂತರ ನವೆಂಬರ್ 8 ರಂದು ರತ್ನ ಖಚಿತ ಸಿಂಹಾಸನವನ್ನು ಧಾರ್ಮಿಕ ಪೂಜಾ ಕೈಂಕರ್ಯಗಳ ನಂತರ ವಿಸರ್ಜನೆ ಮಾಡಿ, ಭದ್ರತಾ ಕೊಠಡಿಯಲ್ಲಿ ಇರಿಸಲಾಗುವುದು.

andolanait

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

1 hour ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

2 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

4 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

7 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

7 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

7 hours ago