ಮೈಸೂರು

ತುಳಸಿದಾಸ್‌ ಆಸ್ಪತ್ರೆಗೆ ನಾಗಲಕ್ಷ್ಮೀ ಚೌಧರಿ ಭೇಟಿ : ಗುಣಮಟ್ಟದ ಚಿಕಿತ್ಸೆಗೆ ಸೂಚನೆ

ಮೈಸೂರು : ನಗರದ ಸೇಠ್ ಮೋಹನ್ ದಾಸ್ ತುಳಸಿದಾಸ್ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಸೋಮವಾರ ಭೇಟಿ ನೀಡಿ ಗರ್ಭಿಣಿ ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು.

ಮಧ್ಯಾಹ್ನ 2 ಗಂಟೆಗೆ ಆಸ್ಪತ್ರೆಗೆ ಭೇಟಿ ನೀಡಿದ ನಾಗಲಕ್ಷ್ಮೀ ಚೌಧರಿ ಅವರು ಸುಮಾರು 2 ಗಂಟೆಗೂ ಹೆಚ್ಚು ಕಾಲ ಪರಿಶೀಲನೆ ನಡೆಸಿದರು. ಆಸ್ಪತ್ರೆಯಲ್ಲಿ ಸಿಗುತ್ತಿರುವ ಸೌಲಭ್ಯಗಳನ್ನು ಕಣ್ಣಾರೆ ಕಂಡು ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿದರು.

ಆಸ್ಪತ್ರೆ ಬಂದ ಗರ್ಭಿಣಿಯರು ಹಾಗೂ ಬಾಣಂತಿಯನ್ನು ಖುದ್ದು ಭೇಟಿಯಾಗಿ ಮಾತನಾಡಿದರು. ಆಸ್ಪತ್ರೆಯಲ್ಲಿ ಸರಿಯಾದ ಸೌಲಭ್ಯ ಸಿಗುತ್ತಿದೆಯೇ ವೈದ್ಯರು ಹಾಗೂ ಸಿಬ್ಬಂದಿ ನಿಮ್ಮೊಂದಿಗೆ ಹೇಗೆ ವರ್ತಿಸುತ್ತಾರೆ ಏನಾದರೂ ಕುಂದುಕೊರತೆ ಇದೆಯೇ ಎಂದು ಪ್ರಶ್ನಿಸಿದರು. ಈ ವೇಳೆ ಆಸ್ಪತ್ರೆಯಲ್ಲಿದ್ದ ಬಾಣಂತಿಯರ ಸಂಬಂಧಿಕರು ಸೌಲಭ್ಯ ಕೊರತೆಗಳ ಇರುವುದನ್ನು ನಾಗಲಕ್ಷ್ಮಿ ಚೌಧರಿ ಗಮನಕ್ಕೆ ತಂದರು. ಇನ್ನೂ ಕೆಲವರು ಆಸ್ಪತ್ರೆ ಸಿಬ್ಬಂದಿ, ವೈದ್ಯರು ಸರಿಯಾಗಿ ಸ್ಪಂದಿಸುವುದಿಲ್ಲ ಎಂದು ದೂರಿದರು.

ಇದೇ ವೇಳೆ ಮಾತನಾಡಿದ ಚೌಧರಿ, ಸರ್ಕಾರಿ ಆಸ್ಪತ್ರೆಗಳು ಜನಸ್ನೇಹಿಯಾಗಿರಬೇಕು. ನಿಮ್ಮನ್ನು ನಂಬಿ ಆಸ್ಪತ್ರೆಗೆ ಬರುತ್ತಾರೆ. ಅವರಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿ ಎಂದು ಕಿವಿಮಾತು ಹೇಳಿದರು.

ತೀವ್ರ ತೊಂದರೆಯಲ್ಲಿ ಬರುವ ಗರ್ಭಿಣಿ, ಬಾಣಂತಿಯರಿಗೆ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ಒದಗಿಸಬೇಕು. ಗರ್ಭಿಣಿ, ತಾಯಂದಿರಿಗೆ ಪ್ರೋತ್ಸಾಹಧನದ ಸೌಲಭ್ಯ ಕಲ್ಪಿಸಬೇಕು. ಆಸ್ಪತ್ರೆಯಲ್ಲಿನ ಕುಡಿಯುವ ನೀರಿನ ಹಾಗೂ ಶೌಚಾಲಯಗಳ ವ್ಯವಸ್ಥೆ ಸರಿಪಡಿಸುವಂತೆ ತಿಳಿಸಿದರು.

ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಸರ್ಕಾರಿ ಸೌಲಭ್ಯಗಳು ಸಮರ್ಪಕವಾಗಿ ಸಿಗಬೇಕು. ಅಂಗನವಾಡಿಯಲ್ಲಿ ಅಗತ್ಯ ಪರಿಕರಗಳನ್ನು ಸರಿಯಾದ ರೀತಿಯಲ್ಲಿ ವಿತರಿಸಬೇಕು ಎಂದು ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ವೈದ್ಯಕೀಯ ಸೇವೆ, ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆ, ಕುಡಿಯುವ ನೀರು, ಶೌಚಾಲಯಗಳ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದ ಅವರು, ಯಾವುದೇ ರೀತಿಯ ಸೌಲಭ್ಯಗಳ ಕೊರತೆಯಾಗದಂತೆ ಎಚ್ಚರಿಕೆ ವಹಿಸಲು ಸೂಚಿಸಿದರು.

ವಿವಿಧ ವಾರ್ಡ್‌ಗಳಿಗೆ ಭೇಟಿ: ಆಸ್ಪತ್ರೆಯ ಪ್ರತಿ ವಿಭಾಗಕ್ಕೂ ಭೇಟಿ ನೀಡಿದ ನಾಗಲಕ್ಷ್ಮೀ ಚೌಧರಿ ಏನೆಲ್ಲಾ ಕೊರತೆಗಳಿವೆ? ಏನೆಲ್ಲಾ ಸೌಲಭ್ಯ ಸಿಗುತ್ತಿವೆ ಎಂಬುದರ ಮಾಹಿತಿ ಪಡೆದುಕೊಂಡರು. ಪ್ರಸೂತಿ ಹೊರರೋಗಿಗಳ ವಿಭಾಗ, ಪ್ರಸೂತಿ ಪರೀಕ್ಷೆ ಕೊಠಡಿ, ಔಷಧ ವಿತರಣಾ ವಿಭಾಗ, ನವಜಾತು ಶಿಶು ವಿಭಾಗ, ಅಪೌಷ್ಟಿಕ ಮಕ್ಕಳ ಕೇಂದ್ರಗಳಿಗೆ ಭೇಟಿ ನೀಡಿ ಚಿಕಿತ್ಸೆ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.

ನಿಮ್ಮ ಮನೆಗೆ ಆಂದೋಲನದ ಆ ಪತ್ರಕೆ ತಲುಪಿಲ್ಲವೇ.. ಹಾಗಾದ್ರೆ E Paper ಓದಿ

ಆಂದೋಲನ ಡೆಸ್ಕ್

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

6 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

7 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

7 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

8 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

8 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

8 hours ago