ನಾಗಮಂಗಲ: ನಾಗಮಂಗಲ ಪಟ್ಟಣದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಸಂಭವಿಸಿದ್ದ ಗಲಭೆಯಿಂದ ಉಂಟಾಗಿದ್ದ ಉದ್ವಿಗ್ನ ವಾತಾವರಣ ತಿಳಿಗೊಂಡಿದೆ.
ಘಟನೆ ನಡೆದ ದಿನದಿಂದಲೂ ಬಂದ್ ಆಗಿದ್ದ ಅಂಗಡಿಗಳು ನಿನ್ನೆ ಶೇಕಡಾ.50ರಷ್ಟು ತೆರೆದಿವೆ.
ಆತಂಕದ ಕಾರ್ಮೋಡದ ನಡುವೆಯೂ ವ್ಯಾಪಾರಿಗಳು ವಹಿವಾಟು ನಡೆಸಿದ್ದು, ದಿನಸಿ, ಬೇಕರಿ, ಹಾಲು, ಹಣ್ಣು-ಹೂವು, ಮೊಬೈಲ್ ಅಂಗಡಿಗಳು ಸೇರಿದಂತೆ ವಿವಿಧ ವಾಣಿಜ್ಯ ಮಳಿಗೆಗಳು ತೆರೆದಿವೆ.
ಎಲ್ಲಾ ಆತಂಕಗಳನ್ನು ಬಿಟ್ಟು ಜನರು ಅಗತ್ಯ ವಸ್ತುಗಳನ್ನು ಕೊಳ್ಳಲು ಮನೆಯಿಂದ ಹೊರ ಬಂದಿದ್ದಾರೆ.
ಇನ್ನು ತರಗತಿಗಳು ಕೂಡ ಓಪನ್ ಆಗಿದ್ದು, ಕೆಎಸ್ಆರ್ಟಿಸಿ ಬಸ್ಗಳು ಕೂಡ ಸಂಚಾರ ಮಾಡಿವೆ.
ಇನ್ನು ಸಾರ್ವಜನಿಕರ ಆತಂಕ ನಿವಾರಣೆ ಮಾಡಲು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರ ನೇತೃತ್ವದಲ್ಲಿ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ನಡೆದಿದೆ.
ಈ ಹಿನ್ನೆಲೆಯಲ್ಲಿ ನಾಗಮಂಗಲ ಪಟ್ಟಣದಲ್ಲಿ ಜನಜೀವನ ಎಂದಿನಂತೆ ಇದ್ದು, ಆತಂಕದಿಂದ ಜನತೆ ಹೊರ ಬಂದಿದ್ದಾರೆ ಎನ್ನಲಾಗಿದೆ.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…