ನಾಗಮಂಗಲ: ನಾಗಮಂಗಲ ಪಟ್ಟಣದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಸಂಭವಿಸಿದ್ದ ಗಲಭೆಯಿಂದ ಉಂಟಾಗಿದ್ದ ಉದ್ವಿಗ್ನ ವಾತಾವರಣ ತಿಳಿಗೊಂಡಿದೆ.
ಘಟನೆ ನಡೆದ ದಿನದಿಂದಲೂ ಬಂದ್ ಆಗಿದ್ದ ಅಂಗಡಿಗಳು ನಿನ್ನೆ ಶೇಕಡಾ.50ರಷ್ಟು ತೆರೆದಿವೆ.
ಆತಂಕದ ಕಾರ್ಮೋಡದ ನಡುವೆಯೂ ವ್ಯಾಪಾರಿಗಳು ವಹಿವಾಟು ನಡೆಸಿದ್ದು, ದಿನಸಿ, ಬೇಕರಿ, ಹಾಲು, ಹಣ್ಣು-ಹೂವು, ಮೊಬೈಲ್ ಅಂಗಡಿಗಳು ಸೇರಿದಂತೆ ವಿವಿಧ ವಾಣಿಜ್ಯ ಮಳಿಗೆಗಳು ತೆರೆದಿವೆ.
ಎಲ್ಲಾ ಆತಂಕಗಳನ್ನು ಬಿಟ್ಟು ಜನರು ಅಗತ್ಯ ವಸ್ತುಗಳನ್ನು ಕೊಳ್ಳಲು ಮನೆಯಿಂದ ಹೊರ ಬಂದಿದ್ದಾರೆ.
ಇನ್ನು ತರಗತಿಗಳು ಕೂಡ ಓಪನ್ ಆಗಿದ್ದು, ಕೆಎಸ್ಆರ್ಟಿಸಿ ಬಸ್ಗಳು ಕೂಡ ಸಂಚಾರ ಮಾಡಿವೆ.
ಇನ್ನು ಸಾರ್ವಜನಿಕರ ಆತಂಕ ನಿವಾರಣೆ ಮಾಡಲು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರ ನೇತೃತ್ವದಲ್ಲಿ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ನಡೆದಿದೆ.
ಈ ಹಿನ್ನೆಲೆಯಲ್ಲಿ ನಾಗಮಂಗಲ ಪಟ್ಟಣದಲ್ಲಿ ಜನಜೀವನ ಎಂದಿನಂತೆ ಇದ್ದು, ಆತಂಕದಿಂದ ಜನತೆ ಹೊರ ಬಂದಿದ್ದಾರೆ ಎನ್ನಲಾಗಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…