ನಾಗಮಂಗಲ: ನಾಗಮಂಗಲ ಪಟ್ಟಣದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಸಂಭವಿಸಿದ್ದ ಗಲಭೆಯಿಂದ ಉಂಟಾಗಿದ್ದ ಉದ್ವಿಗ್ನ ವಾತಾವರಣ ತಿಳಿಗೊಂಡಿದೆ.
ಘಟನೆ ನಡೆದ ದಿನದಿಂದಲೂ ಬಂದ್ ಆಗಿದ್ದ ಅಂಗಡಿಗಳು ನಿನ್ನೆ ಶೇಕಡಾ.50ರಷ್ಟು ತೆರೆದಿವೆ.
ಆತಂಕದ ಕಾರ್ಮೋಡದ ನಡುವೆಯೂ ವ್ಯಾಪಾರಿಗಳು ವಹಿವಾಟು ನಡೆಸಿದ್ದು, ದಿನಸಿ, ಬೇಕರಿ, ಹಾಲು, ಹಣ್ಣು-ಹೂವು, ಮೊಬೈಲ್ ಅಂಗಡಿಗಳು ಸೇರಿದಂತೆ ವಿವಿಧ ವಾಣಿಜ್ಯ ಮಳಿಗೆಗಳು ತೆರೆದಿವೆ.
ಎಲ್ಲಾ ಆತಂಕಗಳನ್ನು ಬಿಟ್ಟು ಜನರು ಅಗತ್ಯ ವಸ್ತುಗಳನ್ನು ಕೊಳ್ಳಲು ಮನೆಯಿಂದ ಹೊರ ಬಂದಿದ್ದಾರೆ.
ಇನ್ನು ತರಗತಿಗಳು ಕೂಡ ಓಪನ್ ಆಗಿದ್ದು, ಕೆಎಸ್ಆರ್ಟಿಸಿ ಬಸ್ಗಳು ಕೂಡ ಸಂಚಾರ ಮಾಡಿವೆ.
ಇನ್ನು ಸಾರ್ವಜನಿಕರ ಆತಂಕ ನಿವಾರಣೆ ಮಾಡಲು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರ ನೇತೃತ್ವದಲ್ಲಿ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ನಡೆದಿದೆ.
ಈ ಹಿನ್ನೆಲೆಯಲ್ಲಿ ನಾಗಮಂಗಲ ಪಟ್ಟಣದಲ್ಲಿ ಜನಜೀವನ ಎಂದಿನಂತೆ ಇದ್ದು, ಆತಂಕದಿಂದ ಜನತೆ ಹೊರ ಬಂದಿದ್ದಾರೆ ಎನ್ನಲಾಗಿದೆ.
ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…
ಕೆ.ಆರ್.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…
ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…
ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.…
ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆ, ಗ್ರಾಮ ರಸ್ತೆ, ಗಡಿ ರಸ್ತೆಗಳ ಬದಿಯಲ್ಲಿರುವ ಗಿಡ ಮರಗಳು ನೆರಳು ನೀಡುತ್ತಿವೆ…
ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆ ಸಿಲಿಂಡರ್ಗಳ ದರವನ್ನು ಮೇ ೧ರಿಂದ ಒಂದೇ ಬಾರಿಗೆ ೯೯೧ರೂ.ಗಳಿಗೆ ಏರಿಕೆ ಮಾಡಿದ್ದು, ಇದರಿಂದಾಗಿ ಹೋಟೆಲ್ಗಳಲ್ಲಿ…