ಮೈಸೂರು: ರಾಜ್ಯದಲ್ಲಿ ಕಳೆದ ಫೆಬ್ರವರಿ ತಿಂಗಳಿನಿಂದ ತಾಪಮಾನ ತೀವ್ರ ಏರಿಕೆ ಕಂಡಿದ್ದು, ಜನತೆ ಹೈರಾಣಾಗಿದ್ದಾರೆ. ಈ ಬೆನ್ನಲ್ಲೇ ಕಾಡು ಪ್ರಾಣಿಗಳೂ ಸಹ ಮಧ್ಯಾಹ್ನದ ವೇಳೆಗೆ ಕೆರೆ ಹಾಗೂ ನದಿಗಳಿಗೆ ಇಳಿದು ದೇಹ ತಂಪಾಗಿಸಿಕೊಳ್ಳುತ್ತಿವೆ.
ನಾಗರಹೊಳೆ ಉದ್ಯಾನವನದಲ್ಲಿ ಹುಲಿಯೊಂದು ನೆತ್ತಿ ಸುಡುತ್ತಿರುವ ಬಿಸಿಲನ್ನು ತಾಳಲಾರದೇ ನೀರಿನಲ್ಲಿ ಮಲಗಿದೆ. ಈ ದೃಶ್ಯ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಸೆರೆ ಸಿಕ್ಕಿದ್ದು, ನೀರಿನಲ್ಲಿ ಆಟವಾಡುತ್ತಿರುವ ಹುಲಿಯನ್ನು ಕಂಡು ಪ್ರವಾಸಿಗರು ಫುಲ್ ಖುಷ್ ಆಗಿದ್ದಾರೆ.
ನೀರಿನಲ್ಲಿ ಕೆಲ ಸಮಯ ಕಳೆದ ಬಳಿಕ ಹುಲಿ ಘರ್ಜನೆ ಮಾಡಿಕೊಂಡು ಕೆರೆಯಿಂದ ತೆರಳಿದೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು, ನೆಟ್ಟಿಗರು ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…