ಮೈಸೂರು: ನಾಗರಹೊಳೆ ಅರಣ್ಯ ವ್ಯಾಪ್ತಿಯ ಮೇಟಿಕುಪ್ಪೆ ವಲಯದಲ್ಲಿ ಶನಿವಾರ ತಡರಾತ್ರಿ ಕಾಡಾನೆ ದಾಳಿಗೆ ಸಿಲುಕಿ ಮಹದೇವಸ್ವಾಮಿ ಎಂಬ ಅರಣ್ಯ ವೀಕ್ಷಕ (ದಿನಗೂಲಿ ನೌಕರ) ಸಾವನ್ನಪ್ಪಿದ್ದಾರೆ.
ನಾಗರಹೊಳೆ ಅರಣ್ಯ ವ್ಯಾಪ್ತಿಯ ಮೇಟಿಕುಪ್ಪೆ ವಲದ ವ್ಯಾಪ್ತಿಯಲ್ಲಿ ಕಳೆದ ಕೆಲದಿನಗಳಿಂದ ಕಾಡಾನೆ ಹಾವಳಿ ಇದ್ದ ಭಾಗದಲ್ಲಿ ಆನೆಯನ್ನು ಕಾಡಿಗೆ ಹಿಮ್ಮೆಟ್ಟಿಸಲಾಗುತ್ತು. ಅದರಂತೆ ಡಿ.31ರ ತಡರಾತ್ರಿ ಆನೆಯನ್ನು ಹಿಮ್ಮೆಟ್ಟಿಸುವ ವೇಳೆ ಏಕಾಏಕಿ ದಾಳಿ ನಡೆಸಿದ ಕಾಡಾನೆ ಮಹದೇವಸ್ವಾಮಿ ಎಂಬ ವೀಕ್ಷಕನನ್ನು ಬಲಿ ಪಡೆದುಕೊಂಡಿದೆ. ದಾಳಿಯ ತೀವ್ರತೆಗೆ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತ ದೇಹವನ್ನು ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
ಶುಕ್ರವಾರವಷ್ಟೇ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಚಿಕ್ಕ ಬೀಚನಹಳ್ಳಿಯ ಬಳಿ ಕಾಡಾನೆ ದಾಳಿಗೆ ರೈ ಮಹಿಳೆಯೊಬರು ಬಲಿಯಾಗಿದ್ದರು. ಒಂದು ದಿನದ ಅಂತರದಲ್ಲಿ ಇಬ್ಬರು ಕಾಡಾನೆ ದಾಳಿಗೆ ಬಲಿಯಾದಂತಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…