ಮೈಸೂರು

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ: ಸೀಮಾ ಮೊದಲ ಮಹಿಳಾ ನಿರ್ದೇಶಕಿ

ಮೈಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಮೊದಲ ಮಹಿಳಾ ನಿರ್ದೇಶಕಿಯಾಗಿ ಭಾರತೀಯ ಅರಣ್ಯ ಸೇವೆ (I F S) ಅಧಿಕಾರಿ ಪಿ.ಎ ಸೀಮಾ ಅಧಿಕಾರಿ ಸ್ವೀಕರಿಸಿದ್ದಾರೆ.

ಮೂಲತ: ಮಡಿಕೇರಿಯ ನಾಪೋಕ್ಲುವಿನ ಪಾಡ್ಯಮಂಡ ಗ್ರಾಮದವರಾದ ಪಿ.ಎ ಸೀಮಾ ರವರು ಈ ಹುದ್ದೆ ಅಲಂಕರಿಸುವ ಮೂಲಕ ಕರ್ನಾಟಕದ ಮೊಟ್ಟ ಮೊದಲ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಮಹಿಳೆ ನಿರ್ದೇಶಕಿ ಎಂದೆನಿಸಿಕೊಂಡಿದ್ದಾರೆ.

ಸೀಮಾ ಅವರು ಈ ಹಿಂದೆ ಹುಣಸೂರು ವಿಭಾಗದ ಡಿ.ಸಿ.ಎಫ್ ಆಗಿ ಸೇವೆ ಸಲಿಸಿದ್ದರು. 2017ರ ಬ್ಯಾಚ್‌ ಅಧಿಕಾರಿಯಾದ ಅವರು, ಮೈಸೂರು, ಮಂಡ್ಯ, ಹುಣಸೂರು, ಮಡಿಕೇರಿಯಲ್ಲಿ ಡಿ ಸಿ ಎಫ್ ಆಗಿ ಸೇವೆ ಸಲ್ಲಿಸಿದ್ದರು. ಕಳೆದ ಎರಡು ವರ್ಷಗಳ ಹಿಂದೆ ಆನೆಗಳ ಕಾರ್ಯಪಡೆಯ ಹೆಚ್ಚುವರಿ ಡಿ.ಸಿ.ಎಫ್ ಆಗಿ ಕಾರ್ಯನಿರ್ವಹಿಸಿ ಹುಣಸೂರು ಹಾಗೂ ಕೆ ಆರ್ ನಗರದ ವಿಭಾಗದಲ್ಲಿ ಮಾನವ ಹಾಗೂ ಆನೆಗಳ ನಡುವೆ ಸಂಘರ್ಷವನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿ ಪ್ರಶಂಸೆಗೆ ಒಳಗಾಗಿದ್ದರು.

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಕೇರಳ ಕರ್ನಾಟಕ ಭಾಗ ಹಾಗೂ ಕೊಡಗು ಮತ್ತು ಮೈಸೂರು ಗಡಿ ಭಾಗವನ್ನು ಕೂಡ ಹೊಂದಿದ್ದು ಇಲ್ಲಿ ನಿರಂತರ ಬೇಟೆಯಾಡುವುದು ಹಾಗೂ ಆನೆ ಮಾನವ ನಡುವೆ ಸಂಘರ್ಷವನ್ನು ತಡೆಗಟ್ಟಲು ಉತ್ತಮ ಅಧಿಕಾರಿಯ ನಿರೀಕ್ಷೆಯಲ್ಲಿದ್ದ ಸ್ಥಳೀಯರಿಗೆ ಪಿ.ಎ ಸೀಮಾ ರವರ ಆಯ್ಕೆ ಹೆಚ್ಚಿನ ನಿರೀಕ್ಷೆಯನ್ನು ಮೂಡಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಕೊರಿಯನ್ ಗೇಮ್ಸ್ ನಿಷೇಧಿಸಿ

ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…

4 hours ago

ಓದುಗರ ಪತ್ರ: ಖಾಲಿ ನಿವೇಶನದಲ್ಲಿರುವ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…

4 hours ago

ಓದುಗರ ಪತ್ರ: ಬೆಳವಾಡಿ ಕೆರೆ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…

4 hours ago

‘ಮಾದಕ ವಸ್ತು ಮಾರಾಟ ಮಾಡಿದರೆ ಕ್ರಮ’

ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್‌ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…

4 hours ago

ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯವರ ಸರಸ ಸಲ್ಲಾಪ

ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…

5 hours ago

ಮಾನಂದವಾಡಿ ರಸ್ತೆಯಲ್ಲಿ ಅಪಘಾತಕ್ಕೆ ಬೀಳಬೇಕಿದೆ ಬ್ರೇಕ್…

ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್‌ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…

5 hours ago