ಮೈಸೂರು

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ: ಸೀಮಾ ಮೊದಲ ಮಹಿಳಾ ನಿರ್ದೇಶಕಿ

ಮೈಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಮೊದಲ ಮಹಿಳಾ ನಿರ್ದೇಶಕಿಯಾಗಿ ಭಾರತೀಯ ಅರಣ್ಯ ಸೇವೆ (I F S) ಅಧಿಕಾರಿ ಪಿ.ಎ ಸೀಮಾ ಅಧಿಕಾರಿ ಸ್ವೀಕರಿಸಿದ್ದಾರೆ.

ಮೂಲತ: ಮಡಿಕೇರಿಯ ನಾಪೋಕ್ಲುವಿನ ಪಾಡ್ಯಮಂಡ ಗ್ರಾಮದವರಾದ ಪಿ.ಎ ಸೀಮಾ ರವರು ಈ ಹುದ್ದೆ ಅಲಂಕರಿಸುವ ಮೂಲಕ ಕರ್ನಾಟಕದ ಮೊಟ್ಟ ಮೊದಲ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಮಹಿಳೆ ನಿರ್ದೇಶಕಿ ಎಂದೆನಿಸಿಕೊಂಡಿದ್ದಾರೆ.

ಸೀಮಾ ಅವರು ಈ ಹಿಂದೆ ಹುಣಸೂರು ವಿಭಾಗದ ಡಿ.ಸಿ.ಎಫ್ ಆಗಿ ಸೇವೆ ಸಲಿಸಿದ್ದರು. 2017ರ ಬ್ಯಾಚ್‌ ಅಧಿಕಾರಿಯಾದ ಅವರು, ಮೈಸೂರು, ಮಂಡ್ಯ, ಹುಣಸೂರು, ಮಡಿಕೇರಿಯಲ್ಲಿ ಡಿ ಸಿ ಎಫ್ ಆಗಿ ಸೇವೆ ಸಲ್ಲಿಸಿದ್ದರು. ಕಳೆದ ಎರಡು ವರ್ಷಗಳ ಹಿಂದೆ ಆನೆಗಳ ಕಾರ್ಯಪಡೆಯ ಹೆಚ್ಚುವರಿ ಡಿ.ಸಿ.ಎಫ್ ಆಗಿ ಕಾರ್ಯನಿರ್ವಹಿಸಿ ಹುಣಸೂರು ಹಾಗೂ ಕೆ ಆರ್ ನಗರದ ವಿಭಾಗದಲ್ಲಿ ಮಾನವ ಹಾಗೂ ಆನೆಗಳ ನಡುವೆ ಸಂಘರ್ಷವನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿ ಪ್ರಶಂಸೆಗೆ ಒಳಗಾಗಿದ್ದರು.

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಕೇರಳ ಕರ್ನಾಟಕ ಭಾಗ ಹಾಗೂ ಕೊಡಗು ಮತ್ತು ಮೈಸೂರು ಗಡಿ ಭಾಗವನ್ನು ಕೂಡ ಹೊಂದಿದ್ದು ಇಲ್ಲಿ ನಿರಂತರ ಬೇಟೆಯಾಡುವುದು ಹಾಗೂ ಆನೆ ಮಾನವ ನಡುವೆ ಸಂಘರ್ಷವನ್ನು ತಡೆಗಟ್ಟಲು ಉತ್ತಮ ಅಧಿಕಾರಿಯ ನಿರೀಕ್ಷೆಯಲ್ಲಿದ್ದ ಸ್ಥಳೀಯರಿಗೆ ಪಿ.ಎ ಸೀಮಾ ರವರ ಆಯ್ಕೆ ಹೆಚ್ಚಿನ ನಿರೀಕ್ಷೆಯನ್ನು ಮೂಡಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

3 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

16 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

16 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

16 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

16 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

16 hours ago