ಮೈಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಮೊದಲ ಮಹಿಳಾ ನಿರ್ದೇಶಕಿಯಾಗಿ ಭಾರತೀಯ ಅರಣ್ಯ ಸೇವೆ (I F S) ಅಧಿಕಾರಿ ಪಿ.ಎ ಸೀಮಾ ಅಧಿಕಾರಿ ಸ್ವೀಕರಿಸಿದ್ದಾರೆ.
ಮೂಲತ: ಮಡಿಕೇರಿಯ ನಾಪೋಕ್ಲುವಿನ ಪಾಡ್ಯಮಂಡ ಗ್ರಾಮದವರಾದ ಪಿ.ಎ ಸೀಮಾ ರವರು ಈ ಹುದ್ದೆ ಅಲಂಕರಿಸುವ ಮೂಲಕ ಕರ್ನಾಟಕದ ಮೊಟ್ಟ ಮೊದಲ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಮಹಿಳೆ ನಿರ್ದೇಶಕಿ ಎಂದೆನಿಸಿಕೊಂಡಿದ್ದಾರೆ.
ಸೀಮಾ ಅವರು ಈ ಹಿಂದೆ ಹುಣಸೂರು ವಿಭಾಗದ ಡಿ.ಸಿ.ಎಫ್ ಆಗಿ ಸೇವೆ ಸಲಿಸಿದ್ದರು. 2017ರ ಬ್ಯಾಚ್ ಅಧಿಕಾರಿಯಾದ ಅವರು, ಮೈಸೂರು, ಮಂಡ್ಯ, ಹುಣಸೂರು, ಮಡಿಕೇರಿಯಲ್ಲಿ ಡಿ ಸಿ ಎಫ್ ಆಗಿ ಸೇವೆ ಸಲ್ಲಿಸಿದ್ದರು. ಕಳೆದ ಎರಡು ವರ್ಷಗಳ ಹಿಂದೆ ಆನೆಗಳ ಕಾರ್ಯಪಡೆಯ ಹೆಚ್ಚುವರಿ ಡಿ.ಸಿ.ಎಫ್ ಆಗಿ ಕಾರ್ಯನಿರ್ವಹಿಸಿ ಹುಣಸೂರು ಹಾಗೂ ಕೆ ಆರ್ ನಗರದ ವಿಭಾಗದಲ್ಲಿ ಮಾನವ ಹಾಗೂ ಆನೆಗಳ ನಡುವೆ ಸಂಘರ್ಷವನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿ ಪ್ರಶಂಸೆಗೆ ಒಳಗಾಗಿದ್ದರು.
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಕೇರಳ ಕರ್ನಾಟಕ ಭಾಗ ಹಾಗೂ ಕೊಡಗು ಮತ್ತು ಮೈಸೂರು ಗಡಿ ಭಾಗವನ್ನು ಕೂಡ ಹೊಂದಿದ್ದು ಇಲ್ಲಿ ನಿರಂತರ ಬೇಟೆಯಾಡುವುದು ಹಾಗೂ ಆನೆ ಮಾನವ ನಡುವೆ ಸಂಘರ್ಷವನ್ನು ತಡೆಗಟ್ಟಲು ಉತ್ತಮ ಅಧಿಕಾರಿಯ ನಿರೀಕ್ಷೆಯಲ್ಲಿದ್ದ ಸ್ಥಳೀಯರಿಗೆ ಪಿ.ಎ ಸೀಮಾ ರವರ ಆಯ್ಕೆ ಹೆಚ್ಚಿನ ನಿರೀಕ್ಷೆಯನ್ನು ಮೂಡಿಸಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…