ಮೈಸೂರು

ನಾಗರಹೊಳೆ| ಕಾಡುಪ್ರಾಣಿ ಬೇಟೆ: ಓರ್ವ ಸೆರೆ, ಮೂವರು ಪರಾರಿ

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಕಾಡು ಪ್ರಾಣಿ ಬೇಟೆಯಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಅರಣ್ಯಾಧಿಕಾರಿಗಳು ಕೃತ್ಯಕ್ಕೆ ಬಳಸಿದ್ದ ಕಾರು, ಪರಿಕರ ಹಾಗೂ ಪ್ರಾಣಿ ಮಾಂಸ, ಚರ್ಮ ವಶಕ್ಕೆ ಪಡೆದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಸೂಳಗೋಡು ಗ್ರಾಮದ ಲೇ.ಚಂಗಪ್ಪರ ಪುತ್ರ ಮೋಕ್ಷಿತ್ ಬಂಧಿತ ಆರೋಪಿ. ಉಳಿದ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ.

ಘಟನೆ ವಿವರ: ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಆನೆಚೌಕೂರು ವನ್ಯಜೀವಿ ವಲಯದ ದೇವಮಚ್ಚಿ ಶಾಖೆಯ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದ್ದು, ಶನಿವಾರ ಬೆಳಗ್ಗೆ ಗಸ್ತಿನಲ್ಲಿದ್ದ ವೇಳೆ ಬಂದ ಖಚಿತ ಮಾಹಿತಿ ಮೇರೆಗೆ ಅಕ್ರಮವಾಗಿ ಅರಣ್ಯ ಪ್ರವೇಶಿಸಿದ್ದ ಆರೋಪಿಯನ್ನು ಬಂಧಿಸಿ, ಸುಮಾರು 12 ಕೆ.ಜಿ ಕಾಡು ಪ್ರಾಣಿ ಮಾಂಸ, ಜಿಂಕೆ ಚರ್ಮ ಹಾಗೂ ಕೃತ್ಯಕ್ಕೆ ಬಳಸಿದ್ದ ಪರಿಕರಗಳನ್ನು ವಶಕ್ಕೆ ಪಡೆದರು. ಆರೋಪಿಯು ಪಕ್ಕದ ಹಾಡಿ ಬಳಿ ನಿಲ್ಲಿಸಿದ್ದ ಆತನ ಮಾರುತಿ-800 ಕಾರನ್ನು ವಶಕ್ಕೆ ಪಡೆಯಲಾಗಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ಕ್ರಮವಹಿಸಲಾಗಿದೆ ಎಂದು ಡಿಸಿಎಫ್ ಹರ್ಷಕುಮಾರ್ ಚಿಕ್ಕನರಗುಂದ ತಿಳಿಸಿದ್ದಾರೆ.

ಕಾರ್ಯಾಚರಣೆಯು ಡಿಸಿಎಫ್ ಮತ್ತು ಎಸಿಎಫ್ ದಯಾನಂದ್ ಡಿ.ಎಸ್. ಮಾರ್ಗದರ್ಶನದಲ್ಲಿ ಆರ್.ಎಫ್.ಓ.ದಿಲೀಪ್‌ಕುಮಾರ್.ಪಿ.ಸಿ, ಡಿ.ಆರ್.ಎಫ್.ಓಗಳಾದ ಎಂ.ಸಿದ್ದಪ್ಪಾಜಿ, ವಿನೋದ್‌ಕುಮಾರ್, ಅರಣ್ಯ ರಕ್ಷಕ ನಿತಿನ್‌ನಾಯ್ಕ, ಅರಣ್ಯ ವೀಕ್ಷಕ ಶಿವಕುಮಾರ್, ಸಿಬ್ಬಂದಿಗಳು ಭಾಗವಹಿಸಿದ್ದರು.

andolanait

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

2 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

2 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

2 hours ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

2 hours ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

2 hours ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

2 hours ago