ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಕಾಡು ಪ್ರಾಣಿ ಬೇಟೆಯಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಅರಣ್ಯಾಧಿಕಾರಿಗಳು ಕೃತ್ಯಕ್ಕೆ ಬಳಸಿದ್ದ ಕಾರು, ಪರಿಕರ ಹಾಗೂ ಪ್ರಾಣಿ ಮಾಂಸ, ಚರ್ಮ ವಶಕ್ಕೆ ಪಡೆದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಸೂಳಗೋಡು ಗ್ರಾಮದ ಲೇ.ಚಂಗಪ್ಪರ ಪುತ್ರ ಮೋಕ್ಷಿತ್ ಬಂಧಿತ ಆರೋಪಿ. ಉಳಿದ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ.
ಘಟನೆ ವಿವರ: ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಆನೆಚೌಕೂರು ವನ್ಯಜೀವಿ ವಲಯದ ದೇವಮಚ್ಚಿ ಶಾಖೆಯ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದ್ದು, ಶನಿವಾರ ಬೆಳಗ್ಗೆ ಗಸ್ತಿನಲ್ಲಿದ್ದ ವೇಳೆ ಬಂದ ಖಚಿತ ಮಾಹಿತಿ ಮೇರೆಗೆ ಅಕ್ರಮವಾಗಿ ಅರಣ್ಯ ಪ್ರವೇಶಿಸಿದ್ದ ಆರೋಪಿಯನ್ನು ಬಂಧಿಸಿ, ಸುಮಾರು 12 ಕೆ.ಜಿ ಕಾಡು ಪ್ರಾಣಿ ಮಾಂಸ, ಜಿಂಕೆ ಚರ್ಮ ಹಾಗೂ ಕೃತ್ಯಕ್ಕೆ ಬಳಸಿದ್ದ ಪರಿಕರಗಳನ್ನು ವಶಕ್ಕೆ ಪಡೆದರು. ಆರೋಪಿಯು ಪಕ್ಕದ ಹಾಡಿ ಬಳಿ ನಿಲ್ಲಿಸಿದ್ದ ಆತನ ಮಾರುತಿ-800 ಕಾರನ್ನು ವಶಕ್ಕೆ ಪಡೆಯಲಾಗಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ಕ್ರಮವಹಿಸಲಾಗಿದೆ ಎಂದು ಡಿಸಿಎಫ್ ಹರ್ಷಕುಮಾರ್ ಚಿಕ್ಕನರಗುಂದ ತಿಳಿಸಿದ್ದಾರೆ.
ಕಾರ್ಯಾಚರಣೆಯು ಡಿಸಿಎಫ್ ಮತ್ತು ಎಸಿಎಫ್ ದಯಾನಂದ್ ಡಿ.ಎಸ್. ಮಾರ್ಗದರ್ಶನದಲ್ಲಿ ಆರ್.ಎಫ್.ಓ.ದಿಲೀಪ್ಕುಮಾರ್.ಪಿ.ಸಿ, ಡಿ.ಆರ್.ಎಫ್.ಓಗಳಾದ ಎಂ.ಸಿದ್ದಪ್ಪಾಜಿ, ವಿನೋದ್ಕುಮಾರ್, ಅರಣ್ಯ ರಕ್ಷಕ ನಿತಿನ್ನಾಯ್ಕ, ಅರಣ್ಯ ವೀಕ್ಷಕ ಶಿವಕುಮಾರ್, ಸಿಬ್ಬಂದಿಗಳು ಭಾಗವಹಿಸಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…