ಮೈಸೂರು

ಸಾಹಿತ್ಯ, ಚಲನಚಿತ್ರಕ್ಕೂ ಸಾಮಾಜಿಕ ಜವಾಬ್ದಾರಿ ಇದೆ: ನಾಗತಿಗಹಳ್ಳಿ ಚಂದ್ರಶೇಖರ್‌

ಮೈಸೂರು: ಸಾಹಿತ್ಯ ಮತ್ತು ಚಲನಚಿತ್ರಕ್ಕೂ ಸಾಮಾಜಿಕ ಜವಾಬ್ದಾರಿ ಇದೆ. ಇವರೆಡರ ಸಂಬಂಧ ಹೆಚ್ಚಾದರೆ ಮಾತ್ರ ಸಮಾಜಕ್ಕೆ ಹೊಸ ಉತ್ಪನ್ನ ದೊರೆಯಲಿದೆ ಎಂದು ಸಾಹಿತಿ ಡಾ.ನಾಗತಿಹಳ್ಳಿ ಚಂದ್ರಶೇಖರ್ ಅಭಿಪ್ರಾಯಪಟ್ಟಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯ ಯುಜಿಸಿ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ವತಿಯಿಂದ ಇಂದು(ಜನವರಿ.21) ಆಯೋಜಿಸಲಾಗಿದ್ದ ಕನ್ನಡ ಸಾಹಿತ್ಯ ಮತ್ತು ಚಿತ್ರಕತೆ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದರು.

ಬರಹಗಾರ ಅನುಭವ, ಕಲ್ಪನೆಯಿಂದ ಸಂಶೋಧನೆ ಮಾಡಿ ಏಕಾಂಗಿಯಾಗಿ ತನ್ನ ಕೃತಿಯನ್ನು ರಚಿಸುತ್ತಾನೆ. ಲೇಖಕ ಸ್ವಯಂಭು. ಆತನು ತನ್ನ ಅನುಭವ ಮತ್ತು ಕಲ್ಪನೆಗಳನ್ನು ಸಮನ್ವಯಗೊಳಿಸಿ ಕೃತಿ ರಚಿಸುತ್ತಾನೆ. ಸಿನಿಮಾ ಒಂದು ಸಮೂಹ ಕಲೆಯಾಗಿದೆ. ಅಲ್ಲದೇ ನಿರ್ದೇಶಕ ತನ್ನೊಂದಿಗೆ ಹತ್ತಾರು ಜನರನ್ನು ಕಟ್ಟಿಕೊಳ್ಳುತ್ತಾನೆ. ಜೊತೆಗೆ ಆತನು ಹತ್ತಾರು ಸಮಸ್ಯೆ, ಸವಾಲು ಹಾಗೂ ತಾಂತ್ರಿಕ ವಿಚಾರಗಳಿಗೆ ಆದ್ಯತೆ ನೀಡಬೇಕಾಗುತ್ತದೆ ಎಂದು ಹೇಳಿದರು.

ಸಾಹಿತ್ಯದಲ್ಲಿ ಶೇ.95 ವಿಚಾರವಿದ್ದರೆ, ಶೇ.5ರಷ್ಟು ಭಾಗ ವ್ಯವಹಾರ ಇರುತ್ತದೆ. ಆದರೆ ಚಲನಚಿತ್ರದಲ್ಲಿ ಶೇ.95ರಷ್ಟು ವ್ಯವಹಾರವಿದ್ದರೆ, ಶೇ.5ರಷ್ಟು ಮಾತ್ರ ವಿಚಾರ ಇರಲಿದೆ. ಹೀಗಾಗಿ ಒಬ್ಬ ಲೇಖಕನಿಗೆ ಒಂದು ಪೆನ್ಸಿಲ್ ದೊರೆತರೆ ಅದ್ಭುತ ಕಾವ್ಯ ರಚಿಸಬಲ್ಲ. ಆದರೆ, ಸಿನಿಮಾಗಳಿಗೆ ದೊಡ್ಡ ಆರ್ಥಿಕ ಭಾರ ಇರುತ್ತದೆ. ಹಾಗಾಗಿ ಒಂದು ಸಿನಿಮಾ ಮಾಡುವಾಗ ವ್ಯವಹಾರದ ಜ್ಞಾನ ತಿಳಿದುಕೊಂಡೇ ಹೆಜ್ಜೆ ಇಡಬೇಕು. ಹಣ ಕೊಟ್ಟ ನಂತರವೇ ಚಿತ್ರಮಂದಿರಕ್ಕೆ ಪ್ರವೇಶ ನೀಡಲಾಗುತ್ತದೆ. ಈ ವ್ಯಾಕರಣದ ಬಗ್ಗೆ ತಿಳಿದಿರಬೇಕು ಎಂದರು.

ಇನ್ನೂ ಸಿನಿಮಾ ನಿರ್ದೇಶಕರು ಸಾಹಿತ್ಯ ಕೃತಿ ಆಯ್ಕೆ ಮಾಡಿಕೊಂಡಾಗ ಲೇಖಕರೊಂದಿಗೆ ಮುಕ್ತ ಸಂವಾದ ಮಾಡಬೇಕು. ಬದಲಾವಣೆ ಮಾಡುವ ಬಗ್ಗೆ ಸ್ಪಷ್ಟವಾಗಿ ತಿಳಿಸಬೇಕು. ಎಲ್ಲೆಲ್ಲಿ ಬದಲಾವಣೆ ಮಾಡುತ್ತೇನೆ ಎಂಬುದನ್ನು ವಿವರಿಸಬೇಕು. ಸಾಹಿತ್ಯ ಮತ್ತು ನಾಟಕಗಳಿಗೆ ಸೆನ್ಸಾರ್ ಇಲ್ಲ. ಸಿನಿಮಾಗಳಿಗೆ ಸೆನ್ಸಾರ್ ಇದೆ. ಸರ್ಕಾರ ಕುಚೇಷ್ಠೆ ಮಾಡುತ್ತಾರೆಂದು ಕಣ್ಣಿಟ್ಟಿರುತ್ತದೆ. ಸೆನ್ಸಾರ್ ಮಂಡಳಿ ಎಷ್ಟೇ ಚಾಪೆ ಹಾಸಿದರೂ ರಂಗೋಲಿ ಕೆಳಗೆ ನುಸುಳುವುದು ಸಿನಿಮಾದವರಿಗೆ ಕರಗತವಾಗಿದೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಚೀನಾ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: 21 ಜನರು ಸಾವು

ಬೀಜಿಂಗ್:‌ ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…

1 hour ago

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿ ನಡೆದಿದೆ. ಮೈಸೂರು ಮೂಲದ…

2 hours ago

ನೀರಿಗಿಳಿಯುವ ಮುನ್ನ ಇರಲಿ ಎಚ್ಚರ !

ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…

6 hours ago

ಸರಳ, ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ

ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…

6 hours ago

ಬಿಸಿಲಿಗೆ ಪರ್ಯಾಯ ಈಜುಕೊಳಗಳು

ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್‌ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…

6 hours ago

ಗ್ರಾಪಂ ಅಧಿಕಾರಿಗಳ ನಿಗಾಕ್ಕೆ ಜಿಪಿಎಸ್ ಸಿಸ್ಟಂ

ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…

6 hours ago