ಮೈಸೂರು

ನಾಲೆ ನೀರಿಲ್ಲದೇ ಭತ್ತ ಬೆಳೆದ ನಂಜನಗೂಡಿನ ರೈತರು; ವರದಾನವಾದ ಪೂರ್ವ ಮುಂಗಾರು ಮಳೆ

ನಂಜನಗೂಡು: ನಂಜನಗೂಡು ತಾಲ್ಲೂಕಿನ ಬೊಕ್ಕಹಳ್ಳಿ ಗ್ರಾಮದ ರೈತರು ನಾಲೆ ನೀರಿಲ್ಲದೇ ಭತ್ತ ಬೆಳೆದಿದ್ದು ಪೂರ್ವ ಮುಂಗಾರು ಮಳೆ ಇವರ ಪಾಲಿಗೆ ವರದಾನವಾಗಿದೆ.

ಯಾವುದೇ ನದಿ ಮೂಲವನ್ನು ಅವಲಂಬಿಸದೇ ಸುಮಾರು 50ಕ್ಕೂ ಹೆಚ್ಚಿನ ಎಕರೆಯಲ್ಲಿ ರೈತರು ಭತ್ತದ ಕೃಷಿ ಮಾಡಿದ್ದಾರೆ. ಈಗ ಭತ್ತವು ತೆನೆ ಬಿಟ್ಟಿದ್ದು, ಅನ್ನದಾತರ ಮೊಗದಲ್ಲಿ ಸಂತಸ ಮೂಡಿಸಿದೆ.

ಬೊಕ್ಕಹಳ್ಳಿ ಗ್ರಾಮದ ರಾಂಪುರ ನಾಲಾ ವ್ಯಾಪ್ತಿಯಲ್ಲಿ ಮೇ ತಿಂಗಳಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ರೈತರು ನೈಸರ್ಗಿಕವಾಗಿ ಉತ್ತಮ ಭತ್ತದ ಫಸಲು ಕಂಡುಕೊಂಡಿದ್ದಾರೆ. ಭತ್ತಕ್ಕೆ ಹೆಚ್ಚು ಹೆಚ್ಚು ನೀರು ಬೇಕಾಗಿರುವುದರಿಂದ ನಾಲೆಯಿಂದ ನೀರನ್ನು ಪಡೆಯಲಾಗುತ್ತದೆ. ಆದರೂ ಈ ರೈತರು ಮಳೆ ನೀರಿನಿಂದಲೇ ಬೆಳೆ ಬೆಳೆದಿದ್ದು, ಎಲ್ಲರ ಅಚ್ಚರಿಗೆ ಕಾರಣವಾಗಿದೆ.

ಈ ಬಗ್ಗೆ ಖುಷಿ ಹಂಚಿಕೊಂಡಿರುವ ರೈತರು ಉತ್ತಮ ಮಳೆಯಾದರೆ ನಮಗೆ ಯಾವುದೇ ನದಿ ನೀರು ಬೇಕಿಲ್ಲ. ಉತ್ತಮ ಮಳೆಯಿಂದ 50ಕ್ಕೂ ಹೆಚ್ಚಿನ ಎಕರೆಯಲ್ಲಿ ಭತ್ತ ಬೆಳೆದಿದ್ದೇವೆ. ಕಡಿಮೆ ಖರ್ಚಿನಲ್ಲಿ ಬೆಳೆ ಬೆಳೆದು ಹೆಚ್ಚು ಹೆಚ್ಚು ಲಾಭ ಪಡೆದುಕೊಳ್ಳಬಹುದು ಎಂದು ಇತರೆ ರೈತರಿಗೆ ಮಾದರಿಯಾಗಿದ್ದಾರೆ.

andolana

Recent Posts

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

6 mins ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

5 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

5 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

9 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

9 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

9 hours ago