ಮೈಸೂರು

ನಾಲ್ವಡಿ ಅವರ ಜಯಂತಿ ಅದ್ದೂಯಾಗಿ ಆಚರಣೆಯಾಗಬೇಕು : ಪ್ರೊ.ನಂಜರಾಜ ಅರಸು

ಮೈಸೂರು : ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಜಯಂತಿ ಅದ್ದೂರಿಯಿಂದ ಆಚರಣೆಯಾಗಬೇಕು ಎಂದು ಪ್ರೊ.ನಂಜನರಾಜ ಅರಸು ಜಿಲ್ಲಾಡಳಿತಕ್ಕೆ ಮನವಿ ಮಾಡಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್‌ ಜಯಂತಿ ಹಿನ್ನಲೆ  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಾ ಸುದರ್ಶನ್ ಅವರ ನೇತೃತ್ವದಲ್ಲಿ ಅವರ ಕಚೇರಿಯಲ್ಲಿ  ಇಂದು ಪೂರ್ವಭಾವಿ ಸಭೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಅವರು,  ನಾಲ್ವಡಿ ಅವರ ಜಯಂತಿ ಅರ್ಥಪೂರ್ಣವಾಗಿ ಮಾಡಬೇಕು ನಾಲ್ವಡಿ ಅವರು ಎಲ್ಲಾ ಜನರಿಗೆ ಸೇರಿದ್ದವರು ಮುಂದಿನ ಪೀಳಿಗೆಗೆ ಅವರ ಕೊಡುಗೆ ತಲುಪಬೇಕು ಅವರ ಕೊಡುಗೆಯ ಕುರಿತು ಕಿರುಹೊತ್ತಿಗೆ ಹಲವು ವರ್ಷಗಳ ಹಿಂದೆ ಮೈಸೂರು ಮಹಾನಗರ ಪಾಲಿಕೆ ಅದನ್ನು ಮುದ್ರಿಸಿ ಹಂಚಿದೆ ಅದೇ ರೀತಿ ಎರಡು ಅಥವಾ ಮೂರು ಸಾವಿರ ಪ್ರತಿ ಶಾಲಾ ಮಕ್ಕಳಿಗೆ ಹಂಚಬೇಕು ಹಾಗೂ ರಾಜ್ಯ ಮಟ್ಟದ ಕಾರ್ಯಕ್ರಮ ಈ ಭಾರಿ ಮೈಸೂರಲ್ಲೆ ಆಗಿ ಅದರ ಅನುಧಾನ ವಿಭಜಿಸಿ ತಾಲೂಕು ಮಟ್ಟದಲ್ಲಿ ಜಯಂತಿ ಮಾಡಲು ಕ್ರಮ ಕೈಗೊಳ್ಳಬೇಕು ಸಾಧ್ಯವಾದರೆ ಮುಖ್ಯ ಮಂತ್ರಿಗಳ ದಿನಾಂಕದಂದೇ ಕಾರ್ಯಕ್ರಮ ಮಾಡಬೇಕು ಎಂಬ ಉತ್ತಮ ಎಂದು ಸಲಹೆ ನೀಡಿದರು.

ಬಳಿಕ ಮಾತನಾಡಿದ ಕನ್ನಡಪರ ಹೋರಾಟಗಾರರಾದ ಅರವಿಂದ್ ಶರ್ಮ, ನಾಲ್ವಡಿ ಜಯಂತಿ ದಿನದಂದು ಅವರ ಕೊಡುಗೆಯ ಕಿರುಪರಿಚಯ ಮಕ್ಕಳಿಗೆ ಪ್ರಾರ್ಥನಾ ಸಮಯದಲ್ಲಿ ತಿಳಿಸಲು ಮತ್ತು ನಾಲ್ವಡಿ ಅವರ ಭಾವಚಿತ್ರ ಕಡ್ಡಾಯ ಹಾಕಲು ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗು ಖಾಸಗಿ ಶಾಲೆ ಕಾಲೇಜಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಡಳಿತಕ್ಕೆ ಒತ್ತಾಯಿಸಿದರು .

ಎಲ್ಲರ ಮನವಿ ಕೇಳಿದ  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಾ ಸುದರ್ಶನ್‌,  ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳಾಗಿರುವ ಕಾರಣ ಅವರ ಉಪಸ್ಥಿತಿಯಲ್ಲಿ ಸಭೆ ಮಾಡಲು ಸಾಧ್ಯವಿಲ್ಲ ಆದ್ದರಿಂದ ತಮ್ಮ ಸಲಹೆಗಳನ್ನು ಕ್ರೂಡೀಕರಿಸಿ ಅಗತ್ಯ ಕ್ರಮಕ್ಕೆ ಅವರ ಗಮನಕ್ಕೆ ತರುತ್ತೇನೆ ಎಂದರು.

ನಾಲ್ವಡಿ ಜಯಂತಿ ದಿನ ಮತ ಎಣಿಕೆ ಇರುವುದರಿಂದ ಅಂದು ಸಾಂಕೇತಿಕವಾಗಿ ಪುಷ್ಪಾರ್ಚನೆ ಮಾಡಬೇಕು ನಂತರದ ದಿನದಲ್ಲಿ ಮುಖ್ಯಮಂತ್ರಿಯ ದಿನಾಂಕ ತಿಳಿದು ಅದ್ದೂರಿಯಾಗಿ ಆಚರಿಸಬೇಕೆಂದು ಸಭೆಯಲ್ಲಿ ಎಲ್ಲರೂ ಒಕ್ಕೊರಲಿನಿಂದ ಅಭಿಪ್ರಾಯ ತಿಳಿಸಿದರು.

ಈ ಸಭೆಯಲ್ಲಿ ಶ್ರೀಧರ್ ರಾಜೇ ಅರಸ್ , ಯಮುನಾ , ಮಹದೇವು , ನಂಜುಂಡರಾಜ ಅರಸ್ , ಶ್ರೀಕಾಂತ ರಾಜೇ ಅರಸ್ , ಶರತ್ ಅರಸ್ , ಚಂದ್ರಚೂಡ ರಾಜೆ ಅರಸ್ ಇತರರು ಭಾಗವಹಿಸಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

14 mins ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

44 mins ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

4 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

4 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

4 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

5 hours ago