ಮೈಸೂರು

ನಾಲ್ವಡಿ ಅವರ ಜಯಂತಿ ಅದ್ದೂಯಾಗಿ ಆಚರಣೆಯಾಗಬೇಕು : ಪ್ರೊ.ನಂಜರಾಜ ಅರಸು

ಮೈಸೂರು : ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಜಯಂತಿ ಅದ್ದೂರಿಯಿಂದ ಆಚರಣೆಯಾಗಬೇಕು ಎಂದು ಪ್ರೊ.ನಂಜನರಾಜ ಅರಸು ಜಿಲ್ಲಾಡಳಿತಕ್ಕೆ ಮನವಿ ಮಾಡಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್‌ ಜಯಂತಿ ಹಿನ್ನಲೆ  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಾ ಸುದರ್ಶನ್ ಅವರ ನೇತೃತ್ವದಲ್ಲಿ ಅವರ ಕಚೇರಿಯಲ್ಲಿ  ಇಂದು ಪೂರ್ವಭಾವಿ ಸಭೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಅವರು,  ನಾಲ್ವಡಿ ಅವರ ಜಯಂತಿ ಅರ್ಥಪೂರ್ಣವಾಗಿ ಮಾಡಬೇಕು ನಾಲ್ವಡಿ ಅವರು ಎಲ್ಲಾ ಜನರಿಗೆ ಸೇರಿದ್ದವರು ಮುಂದಿನ ಪೀಳಿಗೆಗೆ ಅವರ ಕೊಡುಗೆ ತಲುಪಬೇಕು ಅವರ ಕೊಡುಗೆಯ ಕುರಿತು ಕಿರುಹೊತ್ತಿಗೆ ಹಲವು ವರ್ಷಗಳ ಹಿಂದೆ ಮೈಸೂರು ಮಹಾನಗರ ಪಾಲಿಕೆ ಅದನ್ನು ಮುದ್ರಿಸಿ ಹಂಚಿದೆ ಅದೇ ರೀತಿ ಎರಡು ಅಥವಾ ಮೂರು ಸಾವಿರ ಪ್ರತಿ ಶಾಲಾ ಮಕ್ಕಳಿಗೆ ಹಂಚಬೇಕು ಹಾಗೂ ರಾಜ್ಯ ಮಟ್ಟದ ಕಾರ್ಯಕ್ರಮ ಈ ಭಾರಿ ಮೈಸೂರಲ್ಲೆ ಆಗಿ ಅದರ ಅನುಧಾನ ವಿಭಜಿಸಿ ತಾಲೂಕು ಮಟ್ಟದಲ್ಲಿ ಜಯಂತಿ ಮಾಡಲು ಕ್ರಮ ಕೈಗೊಳ್ಳಬೇಕು ಸಾಧ್ಯವಾದರೆ ಮುಖ್ಯ ಮಂತ್ರಿಗಳ ದಿನಾಂಕದಂದೇ ಕಾರ್ಯಕ್ರಮ ಮಾಡಬೇಕು ಎಂಬ ಉತ್ತಮ ಎಂದು ಸಲಹೆ ನೀಡಿದರು.

ಬಳಿಕ ಮಾತನಾಡಿದ ಕನ್ನಡಪರ ಹೋರಾಟಗಾರರಾದ ಅರವಿಂದ್ ಶರ್ಮ, ನಾಲ್ವಡಿ ಜಯಂತಿ ದಿನದಂದು ಅವರ ಕೊಡುಗೆಯ ಕಿರುಪರಿಚಯ ಮಕ್ಕಳಿಗೆ ಪ್ರಾರ್ಥನಾ ಸಮಯದಲ್ಲಿ ತಿಳಿಸಲು ಮತ್ತು ನಾಲ್ವಡಿ ಅವರ ಭಾವಚಿತ್ರ ಕಡ್ಡಾಯ ಹಾಕಲು ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗು ಖಾಸಗಿ ಶಾಲೆ ಕಾಲೇಜಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಡಳಿತಕ್ಕೆ ಒತ್ತಾಯಿಸಿದರು .

ಎಲ್ಲರ ಮನವಿ ಕೇಳಿದ  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಾ ಸುದರ್ಶನ್‌,  ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳಾಗಿರುವ ಕಾರಣ ಅವರ ಉಪಸ್ಥಿತಿಯಲ್ಲಿ ಸಭೆ ಮಾಡಲು ಸಾಧ್ಯವಿಲ್ಲ ಆದ್ದರಿಂದ ತಮ್ಮ ಸಲಹೆಗಳನ್ನು ಕ್ರೂಡೀಕರಿಸಿ ಅಗತ್ಯ ಕ್ರಮಕ್ಕೆ ಅವರ ಗಮನಕ್ಕೆ ತರುತ್ತೇನೆ ಎಂದರು.

ನಾಲ್ವಡಿ ಜಯಂತಿ ದಿನ ಮತ ಎಣಿಕೆ ಇರುವುದರಿಂದ ಅಂದು ಸಾಂಕೇತಿಕವಾಗಿ ಪುಷ್ಪಾರ್ಚನೆ ಮಾಡಬೇಕು ನಂತರದ ದಿನದಲ್ಲಿ ಮುಖ್ಯಮಂತ್ರಿಯ ದಿನಾಂಕ ತಿಳಿದು ಅದ್ದೂರಿಯಾಗಿ ಆಚರಿಸಬೇಕೆಂದು ಸಭೆಯಲ್ಲಿ ಎಲ್ಲರೂ ಒಕ್ಕೊರಲಿನಿಂದ ಅಭಿಪ್ರಾಯ ತಿಳಿಸಿದರು.

ಈ ಸಭೆಯಲ್ಲಿ ಶ್ರೀಧರ್ ರಾಜೇ ಅರಸ್ , ಯಮುನಾ , ಮಹದೇವು , ನಂಜುಂಡರಾಜ ಅರಸ್ , ಶ್ರೀಕಾಂತ ರಾಜೇ ಅರಸ್ , ಶರತ್ ಅರಸ್ , ಚಂದ್ರಚೂಡ ರಾಜೆ ಅರಸ್ ಇತರರು ಭಾಗವಹಿಸಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ | ರಾಮಮಂದಿರ ಅಕ್ರಮ ಮಂಕಾಗಿಸಿದ ಬಿಜೆಪಿ ಭವಿಷ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…

2 hours ago

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

3 hours ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

3 hours ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

4 hours ago

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

20 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

22 hours ago