ಮೈಸೂರು

ರಂಗೋಲಿಯಲ್ಲಿ ಅರಳಿದ ನಾಲ್ವಡಿ: 8000 ಚದರ ವಿಸ್ತೀರ್ಣದ ರಂಗೋಲಿ

ಮೈಸೂರು : ಮೈಸೂರಿನ ಹೆಮ್ಮೆಯ ದೊರೆ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141 ನೇ ಜನ್ಮ ದಿನೋತ್ಸವ ಹಾಗು ಪರಿಸರ ದಿನದ ಅಂಗವಾಗಿ ಸುಮಾರು 8000 ಚದರ ಅಡಿಯಲ್ಲಿ ರಂಗೋಲಿಯ ಮುಖಾಂತರ ನಾಲ್ವಡಿ ಅವರ ಚಿತ್ರವನ್ನು ಬಿಡಿಸಿ ಗೌರವ ಅರ್ಪಿಸಲಾಗಿದೆ.

ಕಾರ್ಯಕ್ರಮಕ್ಕೆ ನಮ್ಮ ಮೈಸೂರಿನ ಹೆಮ್ಮಯ ವಿದ್ಯಾ ಸಂಸ್ಥೆ ಯಾದ ಶಾಂತಲಾ ವಿದ್ಯಾ ಪೀಠ ಶಾಲೆ ಸಿದ್ದಾರ್ಥನಗರ, ಮೈಸೂರು ಇಲ್ಲಿನ ಕಾರ್ಯದರ್ಶಿಯಾದ ಸಂತೋಷ್ ಕುಮಾರ್ ಎಂ ಎಸ್ ಇವರ ಅನುಧಾನದೊಂದಿದೆ (sponsor) ಪುನೀತ್ ಕಲಾವಿದರ ಬಳಗ ಮೈಸೂರು ಇವರ ತಂಡದಿಂದ ಶ್ರೀ ನಾಲ್ವಡಿ ಭಾವಚಿತ್ರವನ್ನು ಬಿಡಿಸಿ ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಇಬ್ಬರು ಸಾಧಕರಿಗೆ ಶಾಂತಲಾ ವಿದ್ಯಾಪೀಠ ಪ್ರಶಸ್ತಿ2025 ಕೊಟ್ಟು ಗೌರವಿಸಲಾಗುತ್ತದೆ ಜೊತೆಗೆ ಎಲ್ಲಾ ಗೌರವಾನ್ವಿತ ವ್ಯಕ್ತಿಗಳು ಆಗಮಿಸಿ ಪುಷ್ಪರ್ಚನೆ ಜೊತೆಗೆ ದೀಪವನ್ನು ಹಚ್ಚಿ ಪೂಜ್ಯರನ್ನು ಸ್ಮರಿಸಲಾಯಿತು

ಇದೆ ಸಂಧರ್ಭದಲ್ಲಿ ಕಾವ್ಯಶ್ರೀ ವಿಧ್ಯಾರ್ಥಿನಿಗೆ ಶಾಂತಲಾ ವಿದ್ಯಾಪೀಠ ಪ್ರಶಸ್ತಿ 2025 ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಮೂಡಾ ಅಧ್ಯಕ್ಷ ಹೆಚ್ ವಿ ರಾಜೀವ್, ರಾಷ್ಟ್ರೀಯ ಆರಕ್ಷಕ್ ಮಂಚ್ ಅಧ್ಯಕ್ಷ ಗೋಪಾಲ್ ಕೃಷ್ಣ , ವಾಯುಪುತ್ರ ಡೆವಲಪರ್ಸ್ ಮಾಲಿಕರು ಸಮಾಜ ಸೇವಕ ಚೆಲುವರಾಜು , ಶಾಂತಲ ವಿದ್ಯಾಪೀಠ ಸಂಸ್ಥೆಯ ಕಾರ್ಯದರ್ಶಿ ಸಂತೋಷ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್‌ ಜಲಸಂಧಿ ಸಂಪೂರ್ಣ ಓಪನ್‌ ಮಾಡಿ: ಇರಾನ್‌ಗೆ 48 ಗಂಟೆಗಳ ಗಡುವು ನೀಡಿದ ಟೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಹಾರ್ಮುಜ್‌ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್‌ ಮಾಡಬೇಕು ಎಂದು ಇರಾನ್‌ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಗಡುವು…

2 mins ago

ಓದುಗರ ಪತ್ರ: ನಿಲ್ದಾಣದಲ್ಲಿ ಬಸ್ ನಿಲುಗಡೆಯಾಗಲಿ

ಮೈಸೂರಿನ ಶಾರದಾದೇವಿ ನಗರದ ಸರ್ಕಲ್‌ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…

57 mins ago

ಓದುಗರ ಪತ್ರ: ರೈಲ್ವೆ ಇಲಾಖೆಯಲ್ಲಿ ಕನ್ನಡಿಗರ ನಿರ್ಲಕ್ಷ್ಯ

ರೈಲ್ವೆ ಇಲಾಖೆಯ ಕನ್ನಡ ವಿರೋಧಿ ನೀತಿ ಇನ್ನೊಮ್ಮೆ ಬಯಲಾಗಿದೆ. ನೇಮಕಾತಿ ಮತ್ತು ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ನಡೆಸುವುದಾಗಿ ಭರವಸೆ…

1 hour ago

ಓದುಗರ ಪತ್ರ: ಗರಳಪುರಿ ಉತ್ಸವ ಸ್ವಾಗತಾರ್ಹ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಶ್ರೀಕಂಠೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಆದರೆ ಇದೇ ಮೊದಲ ಬಾರಿಗೆ…

1 hour ago

ರಣರಂಗದಿಂದ ಪಲಾಯನಕ್ಕೆ ಟ್ರಂಪ್ ಸಿದ್ಧತೆ..!

ಅನಗತ್ಯವಾಗಿ ಮತ್ತು ಅಪ್ರಚೋದಿತವಾಗಿ ಇರಾನ್ ವಿರುದ್ಧ ಯುದ್ಧಕ್ಕಿಳಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಿತಿ ಈಗ ಮಹಾಭಾರತದ ಅಭಿಮನ್ಯುವಿನ ಪರಿಸ್ಥಿತಿಯಂತಾಗಿದೆ.…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ವಿರೋಧಿ ಸಿದ್ಧಾಂತದ ರಾಜ್ಯಗಳ ಜತೆ ಬಿಜೆಪಿ ಸೆಣಸಾಟ

೨೦೨೬ರ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಅಖಾಡ ಈಗ ಸಿದ್ಧವಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಮತ್ತು…

4 hours ago