ಮೈಸೂರು: ಕನ್ನಡ ಚಳುವಳಿ ಕೇಂದ್ರ ಸಮಿತಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯನ್ನು ಆಚರಣೆ ಮಾಡಲಾಯಿತು.
ಮೈಸೂರಿನ ಪತ್ರಕರ್ತರ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಕಳೆದ 2015ರಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಲು ಮುಂದಾದಾಗ ನಾನು ಸಿಎಂ ಸಿದ್ದರಾಮಯ್ಯ ಅವರಿಗೆ ಹೇಳಿದ್ದೆ. ರಾಜ್ಯದ ಜನರು ಅದರಲ್ಲೂ ಮೈಸೂರು ಜನರು ಅನ್ನ ತಿನ್ನುತ್ತಾ ಇರೋದು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆಯಿಂದ. ಅನ್ನ ವಿದ್ಯೆ ಕೊಟ್ಟೋರು ಕೃಷ್ಣರಾಜ ಒಡೆಯರ್. ನಾಡಿಗೆ ಆದರ್ಶಪ್ರಾಯ ವ್ಯಕ್ತಿ ಅಂದ್ರೇ ನಾಲ್ವಡಿ ಕೃಷ್ಣರಾಜ ಒಡೆಯರ್. ಕನ್ನಂಬಾಡಿ ಕಟ್ಟೆಯಿಂದ ಚಿತ್ರದುರ್ಗದ ತನಕ, ಮೈಸೂರಿನಿಂದ ಭದ್ರಾವತಿ ತನಕ, ಕೈಗಾರಿಕೆ ಎಲ್ಲವೂ ಕೂಡ ಕೃಷ್ಣರಾಜ ಒಡೆಯರ್ ಕೊಡುಗೆ.
ಅಂತಹವರ ಜಯಂತಿಯನ್ನು ವಿಜೃಂಭಣೆಯಿಂದ ಆಚರಣೆ ಆಗ್ಬೇಕು ಎಂದು ಹೇಳಿದ್ದೆ. ರಾಜ್ಯಕ್ಕೆ ಮೈಸೂರು ಸಂಸ್ಥಾನದ ಕೊಡುಗೆ ಅಪಾರ ಎಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸಾಧನೆಗಳನ್ನು ಹಾಡಿ ಹೊಗಳಿದರು.
ಇನ್ನು ಮೈಸೂರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೇಗೆ ದೇವರೋ, ನನಗೆ ಮೋದಿ ದೇವರು. ಅವರ ಹೆಸರಿನಲ್ಲಿ ನಾನು ಗೆದ್ದುಕೊಂಡು ಬಂದೆ. ನನ್ನ ಗೆಲುವಿನಲ್ಲಿ ಮೈಸೂರು-ಕೊಡಗು ಜನರ ಪಾತ್ರ ಮಹತ್ವದ್ದು. ಅಷ್ಟೇ ಮಹತ್ವದ ಪಾತ್ರ ಮೋದಿ ಅವರದ್ದು ಕೂಡ. ಅವರ 11 ವರ್ಷದ ಸಾಧನೆ ಕುರಿತು ಎಲ್ಲಾ ಕಡೆಯೂ ಪ್ರಚಾರ ಕಾರ್ಯಾಗಾರ ಹಮ್ಮಿಕೊಂಡಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಹೆಳವರಹುಂಡಿ ಸಿದ್ದಪ್ಪ, ಕನ್ನಡಪ್ರಭ ದಿನಪತ್ರಿಕೆಯ ಕಾರ್ಯ ನಿರ್ವಾಹಕ ಸಂಪಾದಕ ಅಂಶಿ ಪ್ರಸನ್ನಕುಮಾರ್, ಸಂಧ್ಯಾ ಸುರಕ್ಷಾ ಟ್ರಸ್ಟ್ನ ಅಧ್ಯಕ್ಷ ನಟರಾಜ ಜೋಯಿಸ್, ಅಂತರಾಷ್ಟ್ರೀಯ ಹಿರಿಯ ಟೆನ್ನಿಸ್ ಆಟಗಾರ ಬಿ.ಎಸ್.ತುಳಸೀರಾಮ್, ಹರಿಹರ ಆನಂದಸ್ವಾಮಿ, ಕನ್ನಡ ಚಳುವಳಿ ಕೇಂದ್ರ ಸಮಿತಿ ಅಧ್ಯಕ್ಷ ಮೂಗೂರು ನಂಜುಂಡಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…