Nameplate named after Srinivas Prasad unveiled on railway flyover
ನಂಜನಗೂಡು: ಅಭಿಮಾನಿಗಳ ಹರ್ಷೊಧ್ಘಾರದ ನಡುವೆ ರೈಲ್ವೆ ಮೆಲ್ಸೇತುವೆಗೆ ಶ್ರೀನಿವಾಸ್ ಪ್ರಸಾದ್ ಹೆಸರಿನ ನಾಮಫಲಕ ಅನಾವರಣಗೊಂಡಿದೆ.
ಮೈಸೂರು-ನಂಜನಗೂಡು ಹೆದ್ದಾರಿಯಲ್ಲಿ ನಿರ್ಮಾಣವಾಗಿರುವ ರೈಲ್ವೆ ಮೇಲ್ಸೇತುವೆಗೆ ಮಾಜಿ ಸಂಸದರಾದ ದಿವಂಗತ ವಿ.ಶ್ರೀನಿವಾಸ್ ಪ್ರಸಾದ್ ಹೆಸರಿನ ನಾಮಫಲಕವನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಹಾಗೂ ಪ್ರಸಾದ್ ಪುತ್ರಿ ಪ್ರತಿಮಾ ಪ್ರಸಾದ್ ಅವರು ಅನಾವರಣಗೊಳಿಸಿದರು.
ಈ ವೇಳೆ ಅಭಿಮಾನಿಗಳು ಹರ್ಷೋದ್ಘಾರದ ಝೇಂಕಾರ ಹೊರಡಿಸಿದರು. ಈ ವೇಳೆ ಮಾತನಾಡಿದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು, ನಮ್ಮ ತಂದೆ ಹಾಗೂ ಮಾಜಿ ಸಂಸದ ಆರ್.ಧ್ರುವನಾರಾಯಣ್ ಅವರ ಜನ್ಮ ದಿನೋತ್ಸವದಂದೇ ಧೀಮಂತ ನಾಯಕ, ಕೇಂದ್ರ ಹಾಗೂ ರಾಜ್ಯದ ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಹೆಸರನ್ನು ಶಾಶ್ವತವಾಗಿಸುವ ಭಾಗ್ಯ ನನ್ನದಾಗಿದೆ. ಇದು ಅತ್ಯಂತ ಖುಷಿಯ ವಿಚಾರ ಎಂದು ಸಂತಸ ವ್ಯಕ್ಪಪಡಿಸಿದರು.
ಬಳಿಕ ಮಾತನಾಡಿದ ವಿ.ಶ್ರೀನಿವಾಸ್ ಪ್ರಸಾದ್ ಪುತ್ರಿ ಪ್ರತಿಮಾ ಪ್ರಸಾದ್ ಅವರು, ಶ್ರೀನಿವಾಸ್ ಪ್ರಸಾದ್ ಹಾಗೂ ಧ್ರುವನಾರಾಯಣ್ ಅಭಿಮಾನಿಗಳ ಸಮ್ಮುಖದಲ್ಲಿ ಈ ನಾಮಫಲಕ ಅನಾವರಣವಾಗಿದ್ದು, ನಮ್ಮಲ್ಲಿನ ಸಾಮರಸ್ಯದ ದ್ಯೊತಕವಾಗಿದೆ. ಈ ಸಂತಸ ಮುಂದುವರಿಯಬೇಕು ಎಂದರು. ಈ ನಾಮಫಲಕ ಅನಾವರಣಕ್ಕಾಗಿ ಸಮ್ಮತಿಸಿದ ದರ್ಶನ್ ಧ್ರುವನಾರಾಯಣ್ ಅವರನ್ನು ಅಭಿನಂದಿಸಿದ ಪ್ರತಿಮಾ ಪ್ರಸಾದ್ ಅವರು, ನಗರಸಭೆಯ ಈ ಕಾರ್ಯ ಶ್ಲಾಘನೀಯ ಎಂದು ಸಂತಸ ವ್ಯಕ್ತಪಡಿಸಿದರು.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…