Nameplate named after Srinivas Prasad unveiled on railway flyover
ನಂಜನಗೂಡು: ಅಭಿಮಾನಿಗಳ ಹರ್ಷೊಧ್ಘಾರದ ನಡುವೆ ರೈಲ್ವೆ ಮೆಲ್ಸೇತುವೆಗೆ ಶ್ರೀನಿವಾಸ್ ಪ್ರಸಾದ್ ಹೆಸರಿನ ನಾಮಫಲಕ ಅನಾವರಣಗೊಂಡಿದೆ.
ಮೈಸೂರು-ನಂಜನಗೂಡು ಹೆದ್ದಾರಿಯಲ್ಲಿ ನಿರ್ಮಾಣವಾಗಿರುವ ರೈಲ್ವೆ ಮೇಲ್ಸೇತುವೆಗೆ ಮಾಜಿ ಸಂಸದರಾದ ದಿವಂಗತ ವಿ.ಶ್ರೀನಿವಾಸ್ ಪ್ರಸಾದ್ ಹೆಸರಿನ ನಾಮಫಲಕವನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಹಾಗೂ ಪ್ರಸಾದ್ ಪುತ್ರಿ ಪ್ರತಿಮಾ ಪ್ರಸಾದ್ ಅವರು ಅನಾವರಣಗೊಳಿಸಿದರು.
ಈ ವೇಳೆ ಅಭಿಮಾನಿಗಳು ಹರ್ಷೋದ್ಘಾರದ ಝೇಂಕಾರ ಹೊರಡಿಸಿದರು. ಈ ವೇಳೆ ಮಾತನಾಡಿದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು, ನಮ್ಮ ತಂದೆ ಹಾಗೂ ಮಾಜಿ ಸಂಸದ ಆರ್.ಧ್ರುವನಾರಾಯಣ್ ಅವರ ಜನ್ಮ ದಿನೋತ್ಸವದಂದೇ ಧೀಮಂತ ನಾಯಕ, ಕೇಂದ್ರ ಹಾಗೂ ರಾಜ್ಯದ ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಹೆಸರನ್ನು ಶಾಶ್ವತವಾಗಿಸುವ ಭಾಗ್ಯ ನನ್ನದಾಗಿದೆ. ಇದು ಅತ್ಯಂತ ಖುಷಿಯ ವಿಚಾರ ಎಂದು ಸಂತಸ ವ್ಯಕ್ಪಪಡಿಸಿದರು.
ಬಳಿಕ ಮಾತನಾಡಿದ ವಿ.ಶ್ರೀನಿವಾಸ್ ಪ್ರಸಾದ್ ಪುತ್ರಿ ಪ್ರತಿಮಾ ಪ್ರಸಾದ್ ಅವರು, ಶ್ರೀನಿವಾಸ್ ಪ್ರಸಾದ್ ಹಾಗೂ ಧ್ರುವನಾರಾಯಣ್ ಅಭಿಮಾನಿಗಳ ಸಮ್ಮುಖದಲ್ಲಿ ಈ ನಾಮಫಲಕ ಅನಾವರಣವಾಗಿದ್ದು, ನಮ್ಮಲ್ಲಿನ ಸಾಮರಸ್ಯದ ದ್ಯೊತಕವಾಗಿದೆ. ಈ ಸಂತಸ ಮುಂದುವರಿಯಬೇಕು ಎಂದರು. ಈ ನಾಮಫಲಕ ಅನಾವರಣಕ್ಕಾಗಿ ಸಮ್ಮತಿಸಿದ ದರ್ಶನ್ ಧ್ರುವನಾರಾಯಣ್ ಅವರನ್ನು ಅಭಿನಂದಿಸಿದ ಪ್ರತಿಮಾ ಪ್ರಸಾದ್ ಅವರು, ನಗರಸಭೆಯ ಈ ಕಾರ್ಯ ಶ್ಲಾಘನೀಯ ಎಂದು ಸಂತಸ ವ್ಯಕ್ತಪಡಿಸಿದರು.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…