ಮೈಸೂರು

ರೈಲ್ವೆ ಮೆಲ್ಸೇತುವೆಗೆ ಶ್ರೀನಿವಾಸ್ ಪ್ರಸಾದ್ ಹೆಸರಿನ ನಾಮಫಲಕ ಅನಾವರಣ‌

ನಂಜನಗೂಡು: ಅಭಿಮಾನಿಗಳ ಹರ್ಷೊಧ್ಘಾರದ ನಡುವೆ ರೈಲ್ವೆ ಮೆಲ್ಸೇತುವೆಗೆ ಶ್ರೀನಿವಾಸ್ ಪ್ರಸಾದ್ ಹೆಸರಿನ ನಾಮಫಲಕ ಅನಾವರಣಗೊಂಡಿದೆ.

ಮೈಸೂರು-ನಂಜನಗೂಡು ಹೆದ್ದಾರಿಯಲ್ಲಿ ನಿರ್ಮಾಣವಾಗಿರುವ ರೈಲ್ವೆ ಮೇಲ್ಸೇತುವೆಗೆ ಮಾಜಿ ಸಂಸದರಾದ ದಿವಂಗತ ವಿ.ಶ್ರೀನಿವಾಸ್‌ ಪ್ರಸಾದ್‌ ಹೆಸರಿನ ನಾಮಫಲಕವನ್ನು ಶಾಸಕ ದರ್ಶನ್‌ ಧ್ರುವನಾರಾಯಣ್‌ ಹಾಗೂ ಪ್ರಸಾದ್‌ ಪುತ್ರಿ ಪ್ರತಿಮಾ ಪ್ರಸಾದ್‌ ಅವರು ಅನಾವರಣಗೊಳಿಸಿದರು.

ಈ ವೇಳೆ ಅಭಿಮಾನಿಗಳು ಹರ್ಷೋದ್ಘಾರದ ಝೇಂಕಾರ ಹೊರಡಿಸಿದರು. ಈ ವೇಳೆ ಮಾತನಾಡಿದ ಶಾಸಕ ದರ್ಶನ್‌ ಧ್ರುವನಾರಾಯಣ್‌ ಅವರು, ನಮ್ಮ ತಂದೆ ಹಾಗೂ ಮಾಜಿ ಸಂಸದ ಆರ್.ಧ್ರುವನಾರಾಯಣ್‌ ಅವರ ಜನ್ಮ ದಿನೋತ್ಸವದಂದೇ ಧೀಮಂತ ನಾಯಕ, ಕೇಂದ್ರ ಹಾಗೂ ರಾಜ್ಯದ ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಹೆಸರನ್ನು ಶಾಶ್ವತವಾಗಿಸುವ ಭಾಗ್ಯ ನನ್ನದಾಗಿದೆ. ಇದು ಅತ್ಯಂತ ಖುಷಿಯ ವಿಚಾರ ಎಂದು ಸಂತಸ ವ್ಯಕ್ಪಪಡಿಸಿದರು.

ಬಳಿಕ ಮಾತನಾಡಿದ ವಿ.ಶ್ರೀನಿವಾಸ್ ಪ್ರಸಾದ್‌ ಪುತ್ರಿ ಪ್ರತಿಮಾ ಪ್ರಸಾದ್‌ ಅವರು, ಶ್ರೀನಿವಾಸ್‌ ಪ್ರಸಾದ್‌ ಹಾಗೂ ಧ್ರುವನಾರಾಯಣ್ ಅಭಿಮಾನಿಗಳ ಸಮ್ಮುಖದಲ್ಲಿ ಈ ನಾಮಫಲಕ ಅನಾವರಣವಾಗಿದ್ದು, ನಮ್ಮಲ್ಲಿನ ಸಾಮರಸ್ಯದ ದ್ಯೊತಕವಾಗಿದೆ. ಈ ಸಂತಸ ಮುಂದುವರಿಯಬೇಕು ಎಂದರು. ಈ ನಾಮಫಲಕ ಅನಾವರಣಕ್ಕಾಗಿ ಸಮ್ಮತಿಸಿದ ದರ್ಶನ್ ಧ್ರುವನಾರಾಯಣ್ ಅವರನ್ನು ಅಭಿನಂದಿಸಿದ ಪ್ರತಿಮಾ ಪ್ರಸಾದ್‌ ಅವರು, ನಗರಸಭೆಯ ಈ ಕಾರ್ಯ ಶ್ಲಾಘನೀಯ ಎಂದು ಸಂತಸ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

11 hours ago

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…

11 hours ago

ಬೆಟ್ಟದಪುರ | ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶ ; ಬಾಲಕ ಸಾವು

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…

13 hours ago

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

14 hours ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

15 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

17 hours ago