ಮೈಸೂರು

ಲೋಕಸಭಾ ಚುನಾವಣೆ: ಮೈಸೂರಲ್ಲಿ ಮತದಾನ ಜಾಗೃತಿಗೆ ನಮ್ಮ ನಡೆ, ಮತಗಟ್ಟೆಯ ಕಡೆ ಅಭಯಾನ

ಮೈಸೂರು: ಮತದಾನ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ನಮ್ಮ ನಡೆ ಮತಟ್ಟೆಯ ಕಡೆ ಜಾಗೃತಿ ಹಾಗೂ ಧ್ವಜಾರೋಹಣ ಕಾರ್ಯಕ್ರಮ ಶೇಷವಾಗಿ ಹಮ್ಮಿಕೊಳ್ಳುವಂತೆ ಪಿರಿಯಾಪಟ್ಟಣ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಿ.ಬಿ.ಸುನೀಲ್ ಕುಮಾರ್ ಹೇಳಿದರು.

ಪಿರಿಯಾಪಟ್ಟಣ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ “ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ” ವಿಷಯ ಕುರಿತ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಚುನಾವಣಾ ಆಯೋಗವು ಏಪ್ರೀಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ಮತದಾರರಲ್ಲಿ ಜಾಗೃತಿ ಮೂಡಿಸಲು ಅಗತ್ಯ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುವಂತೆ ತಿಳಿಸಿದ್ದು, ಅದರಂತೆ ತಾಲ್ಲೂಕಿನ 34 ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಪಿಡಿಓಗಳಿಗೆ ಕ್ರಮಕೈಗೊಳ್ಳುವಂತೆ ಸಲಹೆ ನೀಡಿದರು.

ಮತಗಟ್ಟೆಗಳಲ್ಲಿ ಕನಿಷ್ಠ ಮೂಲಭೂತ ಸೌಲಭ್ಯಗಳು ಇರುವುದನ್ನು ಖಚಿತಪಡಿಸಿಕೊಳ್ಳುವುದರ ಜೊತೆಗೆ ಗ್ರಾಮಪಂಚಾಯಿತಿ ಮಟ್ಟದಲ್ಲಿ ಪಿಡಿಓಗಳ ನೇತೃತ್ವದಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ನಮ್ಮ ನಡೆ, ಮತಗಟ್ಟೆಯ ಕಡೆ ಕಾರ್ಯಕ್ರಮವನ್ನು ಏಪ್ರೀಲ್ 21 ರಂದು ಎಲ್ಲಾ ಮತಗಟ್ಟೆಗಳಲ್ಲಿ ರಾಷ್ಟ್ರೀಯ ಹಬ್ಬ ಮಾದರಿಯಲ್ಲಿ ಹಮ್ಮಿಕೊಳ್ಳುವಂತೆ ತಿಳಿಸಿದರು.

ಏಪ್ರೀಲ್ 26 ಮತದಾನ ದಿನದಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಚುನಾವಣಾ ಆಯೋಗದ ಸೂಚನೆಯಂತೆ ಪ್ರತಿ ಗಂಟೆಗೊಮ್ಮೆ ಮತದಾನ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸುವಂತೆ ಮಾಡುವಂತೆ ತಿಳಿಸಿದರು.

ಬಿಎಲ್ಓಗಳು ತಮ್ಮ ಹಂತದಲ್ಲಿ ಪ್ರತಿ ಮನೆ,ಮನೆಗೂ ಭೇಟಿ ನೀಡಿ ಮತದಾನದ ಮಾಹಿತಿಯನ್ನು ನೀಡುವುದರ ಜೊತೆಗೆ ಕಡ್ಡಾಯವಾಗಿ ಮತದಾನ ಮಾಡುವಂತೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಮತದಾನ ಜಾಗೃತಿ ಪೋಸ್ಟರ್ ಗಳನ್ನು ಬಿಡುಗಡೆಗೊಳಿಸಲಾಯಿತು ಬಳಿಕ ತಾಲ್ಲೂಕು ಪಂಚಾಯಿತಿ ಆವರಣದಿಂದ ಬಸ್ ನಿಲ್ದಾಣದವರೆಗೆ ಪಿಡಿಓಗಳು,ಬಿಎಲ್ಓಗಳ ಸಮ್ಮುಖದಲ್ಲಿ ಜಾಥ ನಡೆಸುವ ಮೂಲಕ ಸಾರ್ವಜನಿಕರಿಗೆ ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು.

ಸಭೆಯಲ್ಲಿ ಟಿಪಿಓ ವಸಂತಲಕ್ಷ್ಮೀ, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕರಾದ ಜಿ.ಸಿ.ಮಹದೇವ್, ಪುರಸಭೆ ಹೆಲ್ತ್ ಇನ್ಸ್ಪೆಕ್ಟರ್ ಮೋಹನ್ ಹಾಗೂ 34 ಗ್ರಾಮಪಂಚಾಯಿತಿ ಪಿಡಿಓಗಳು ಹಾಗೂ ಬಿಎಲ್ಓಗಳು ಭಾಗವಹಿಸಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

8 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

8 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

8 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

8 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

8 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

8 hours ago