ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ
ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ ಸೇತುವೆಯ ಸೀಲಿಂಗ್ ಕಾಂಕ್ರೀಟ್ ಗಾರೆ ಮತ್ತೆ ಕಳಚಿ ಬಿದ್ದಿದೆ.
ಗುರುವಾರ ತಡ ರಾತ್ರಿಯಲ್ಲಿ ಈ ಸೇತುವೆಯ ಕೇಳ ಭಾಗದ ಸೀಲಿಂಗ್ ಕಾಂಕ್ರೀಟ್ ಪ್ಲಾಸ್ಟರ್ ಕಳಚಿ ಬಿದ್ದಿದ್ದು, ಶುಕ್ರವಾರದ ‘ಆಂದೋಲನ’ ದಿನಪತ್ರಿಕೆಯಲ್ಲಿ ಸಚಿತ್ರವಾಗಿ ಪ್ರಕಟವಾದರೂ ಮೈಸೂರು ವಿಭಾಗೀಯ ರೈಲ್ವೆ ಇಲಾಖೆ ಅಧಿಕಾರಿಗಳು ನಂಜನಗೂಡಿನತ್ತ ಮುಖ ಮಾಡಿಲ್ಲ.
ಪತ್ರಿಕೆಯಲ್ಲಿನ ಸುದ್ದಿ ನೋಡಿದ ನಂಜನಗೂಡು ನಗರಸಭಾ ಅಧಿಕಾರಿಗಳು ಶುಕ್ರವಾರವೇ ರೈಲ್ವೆ ಇಂಜಿನಿಯರ್ಗೆ ಈ ಅನಾಹುತದ ಕುರಿತು ಎಚ್ಚರಿಸಿ ಇದನ್ನು ತಕ್ಷಣ ದುರಸ್ತಿಪಡಿಸಿ ಹೆಚ್ಚಿನ ಅನಾಹುತವಾದಲ್ಲಿ ನೀವೇ ಜವಾಬ್ದಾರರು ಎಂದು ಲಿಖಿತವಾಗಿ ಪತ್ರ ಬರೆದು ಮೈಸೂರಿನತ್ತ ಬೊಟ್ಟು ತೋರಿದರೂ ರೈಲ್ವೆ ಅಧಿಕಾರಿಗಳು ಮಾತ್ರ ಇತ್ತ ತಲೆ ಹಾಕಿಲ್ಲ.
ಈ ಮಧ್ಯೆ ಶುಕ್ರವಾರ ರಾತ್ರಿಯೂ ಮತ್ತೆ ರೈಲ್ವೆ ಕೆಳ ಸೇತುವೆಯ ಸಿಲೀಂಗ್ ಕಾಂಕ್ರೀಟ್ನ ಮತ್ತಷ್ಟು ಭಾಗ ಕಳಚಿ ರಸ್ತೆಗೆ ಬಿದ್ದಿದೆ. ಯಾವ ಸಮಯದಲ್ಲಿ ಏನು ಅನಾಹುತ ಕಾದಿದೆಯೋ ಎಂಬ ಆತಂಕ ನಾಗರಿಕರದ್ದಾಗಿದೆ. ರಸ್ತೆ ನೋಡಿ ವಾಹನ ಚಾಲನೆ ಮಾಡಬೇಕಾದ ಸವಾರರು ಈಗ ಈ ಕೆಳ ಸೇತುವೆಯ ಕಳಚಿದ ಭಾಗವನ್ನು ದಿಟ್ಟಿಸುತ್ತಲೇ ಭಯದಿಂದ ವಾಹನ ಚಲಾಯಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…