ಮೈಸೂರು

ಅದ್ಧೂರಿಯಾಗಿ ನೆರವೇರಿದ ನಂಜನಗೂಡಿನ ಗೌತಮ ಪಂಚಮಹಾರಥೋತ್ಸವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಸಹಸ್ರಾರು ಮಂದಿ ಭಕ್ತರ ಸಮ್ಮುಖದಲ್ಲಿ ಗೌತಮ ಪಂಚಮಹಾರಥೋತ್ಸವ ಅದ್ಧೂರಿಯಾಗಿ ನೆರವೇರಿತು.

ಪಂಚಮಹಾರಥೋತ್ಸವದ ಹಿನ್ನೆಲೆಯಲ್ಲಿ ಇಂದು ಮುಂಜಾನೆಯಿಂದಲೇ ನಂಜುಂಡೇಶ್ವರನ ಸನ್ನಿಧಿಯಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನೆರವೇರಿದವು.

ಬಳಿಕ ಗೌತಮ ಪಂಚಮಹಾರಥೋತ್ಸವಕ್ಕೆ ಗಣ್ಯರು ಚಾಲನೆ ನೀಡಿದರು. ನಂಜನಗೂಡಿನ ರಥ ಬೀದಿಗಳಲ್ಲಿ ಸಾಗಿದ ಶ್ರೀಕಂಠೇಶ್ವರ, ಪಾರ್ವತಿ, ಗಣೇಶ, ಸುಬ್ರಮಣ್ಯ, ಚಂಡಿಕೇಶ್ವರ ರಥಗಳನ್ನು ಕಣ್ತುಂಬಿಕೊಳ್ಳಲು ಭಕ್ತರು ಕಿಕ್ಕಿರಿದು ಸೇರಿದ್ದರು.

ರಥೋತ್ಸವದಲ್ಲಿ ಶಾಸಕ ದರ್ಶನ್ ಧ್ರುವ ನಾರಾಯಣ್, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ, ಎಡಿಎ ಶಿವರಾಜ್ ಸೇರಿದಂತೆ ಗಣ್ಯರು ಭಾಗಿಯಾಗಿದ್ದರು.

ಇನ್ನು ರಥೋತ್ಸವದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿತ್ತು.

ಆಂದೋಲನ ಡೆಸ್ಕ್

Recent Posts

ನಂಜನಗೂಡಿನ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತ: ಓರ್ವ ಭಕ್ತ ಸಾವು

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…

11 mins ago

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಸಾವು

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…

35 mins ago

ಇವ ನಮ್ಮವ ಮಸೂದೆ; ಅಮಾಯಕ ಯುವ ಜೀವಗಳ ರಕ್ಷಣೆ

ಜಾತಿ ಆಧಾರಿತ ಅಪರಾಧಕ್ಕೆ ತಡೆ, ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ ಒದಗಿಸುವ ಮಹತ್ವಪೂರ್ಣವಾದ ‘ಇವ ನಮ್ಮವ ಇವ ನಮ್ಮವ’ ಮಸೂದೆಯನ್ನು ರಾಜ್ಯ…

1 hour ago

ಪ್ರೊ.ಡಿ.ಆನಂದ್ – ಮ್ಯಾನೇಜ್‌ಮೆಂಟ್ ಶಿಕ್ಷಣದ ಜಂಗಮ

ನಾಳೆ ಸೇವೆಯಿಂದ ನಿವೃತ್ತಿ ಹೊಂದಲಿರುವ ಮೇಷ್ಟ್ರು  ಸಿ.ಹರಕುಮಾರ್, ಬರಹಗಾರ ಮೂರ್ನಾಲ್ಕು ದಶಕಗಳ ಹಿಂದೆ ಮ್ಯಾನೇಜ್ಮೆಂಟ್ ಕೋರ್ಸ್ ಅಥವಾ ಎಂಬಿಎ ಪದವಿ…

1 hour ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ದಿಲ್ಲಿಯ ಕಾಂಗ್ರೆಸ್ ವರಿಷ್ಠರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ ಸಂದೇಶ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ದಾವಣಗೆರೆ ಉಪ ಚುನಾವಣೆ ಬಂಡಾಯ ಶಮನಗೊಳಿಸಿದ ಮುಖ್ಯಮಂತ್ರಿ ದಿಲ್ಲಿಯ ಕಾಂಗ್ರೆಸ್ ವರಿಷ್ಠರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ…

1 hour ago

108 ವರ್ಷದ ಶಾಲೆಯ ಕುಂಟು ನಡಿಗೆ..

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…

4 hours ago