ಮೈಸೂರು

ನಂ.ಗೂಡು | ತಾಯಿಯಿಂದ ಬೇರ್ಪಟಿದ್ದ ಹುಲಿ ಮರಿ ಸೆರೆ

ನಂಜನಗೂಡು : ತಾಯಿ ಹುಲಿಯಿಂದ ಬೇರ್ಪಡೆಯಾಗಿದ್ದ ಒಂದುವರೆ ವರ್ಷದ ಮರಿ ಹುಲಿ ಸೆರೆಯಾಗಿದೆ.  ತಾಲೂಕಿನ ಹೊಸ ವೀಡು ಗ್ರಾಮದ ಸೋಮೇಶ್ ಎಂಬುವರ ಜಮೀನಿನ ಬಳಿ ಸೆರೆಯಾಗಿದೆ.
ಕಳೆದ ವಾರ ಈರೇಗೌಡನ ಹುಂಡಿ ಗ್ರಾಮದ ಬಳಿ ತಾಯಿ ಹುಲಿಯನ್ನು ಸೆರೆ ಹಿಡಿಯಲಾಗಿತ್ತು. ಎರಡು ಮರಿ ಹುಲಿಗಳ ಜೊತೆ ಬಾರಿ ಗಾತ್ರದ ತಾಯಿ ಹುಲಿ ಹಿರೇಗೌಡನ ಹುಂಡಿ ಸುತ್ತಮುತ್ತ ಕಾಣಿಸಿಕೊಂಡು ಗ್ರಾಮಸ್ಥರ ನಿದ್ರೆಗೆಡಿಸಿತ್ತು.
ಕೃಷಿ ಜಮೀನುಗಳಿಗೆ ರೈತರು ತೆರಳಲು ಆತಂಕ ವ್ಯಕ್ತಪಡಿಸುತ್ತಿದ್ದರು. ನಂಜನಗೂಡಿನ ಶಾಸಕ ದರ್ಶನ್ ಧ್ರುವನಾರಾಯಣ್ ಕಳೆದ ಎರಡು ದಿನಗಳ ಹಿಂದೆ ಅರಣ್ಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೆರೆ ಹಿಡಿಯುವಂತೆ ಖಡಕ್ ಸೂಚನೆ ನೀಡಿದ್ದರು.
ಅಲರ್ಟ್ ಆದ ಹೆಡಿಯಾಲ ಅರಣ್ಯ ಇಲಾಖೆ ಅಧಿಕಾರಿಗಳು ದಸರಾ ಆನೆಗಳಾದ ಭೀಮ,ಮಹೇಂದ್ರ, ಶ್ರೀಕಂಠ ಮತ್ತು ಲಕ್ಷ್ಮಣ ಆನೆಗಳ ಮೂಲಕ ಕಾರ್ಯಾಚರಣೆ ಆರಂಭಿಸಿದ್ದರು.
ಬಂಡಿಪುರ ರಾಷ್ಟ್ರೀಯ ಉದ್ಯಾನವನದ ಸಿಎಫ್ ಪ್ರಭಾಕರನ್ ಹೆಡಿಯಾಲ ಎಸಿಎಫ್ ಪರಮೇಶ್ ಆರ್‌ಎಫ್ಒ ವಿವೇಕ್ ನೇತೃತ್ವದಲ್ಲಿ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.
ಆಂದೋಲನ ಡೆಸ್ಕ್

Recent Posts

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿಯವರ ಕನಸು ನನಸು: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…

13 mins ago

ಯುದ್ಧದ ಸಮಯದಲ್ಲಿ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್‌.ಅಶೋಕ್‌

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.…

25 mins ago

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ವಿದ್ಯಾರ್ಥಿ ಸಾವು

ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…

45 mins ago

ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…

54 mins ago

ವೈರಮುಡಿ ಬ್ರಹ್ಮೋತ್ಸವದಲ್ಲಿ ಭಕ್ತರಿಗೆ ತೊಂದರೆ ಆಗದಂತೆ ಕ್ರಮವಹಿಸಿ: ಎನ್.ಚಲುವರಾಯಸ್ವಾಮಿ

ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…

2 hours ago

ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…

3 hours ago