ಮೈಸೂರು

ನಂಜನಗೂಡು | ಎರಡು ತಲೆ, ನಾಲ್ಕು ಕಣ್ಣು, ಎರಡು ಬಾಯಿ ಇರುವ ಮೇಕೆ ಮರಿ ಜನನ..!

ನಂಜನಗೂಡು : ಎರಡು ತಲೆ, ನಾಲ್ಕು ಕಣ್ಣು, ಎರಡು ಕಿವಿ ಹಾಗೂ ಎರಡು ಬಾಯಿ ಇರುವ ಮೇಕೆ ಮರಿಯೊಂದು ಜನಿಸಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕುರಹಟ್ಟಿ ಗ್ರಾಮದಲ್ಲಿ ಗುರುವಾರ ನಡೆದಿದೆ.

ಈ ವಿಚಿತ್ರ ಮೇಕೆ ಕಂಡು ಗ್ರಾಮಸ್ಥರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಗ್ರಾಮದ ಜನ ತಂಡೋಪತಂಡವಾಗಿ ಮೇಕೆಮರಿಯನ್ನು ನೋಡಲು ಆಗಮಿಸುತ್ತಿದ್ದಾರೆ.

ಕುರಹಟ್ಟಿ ಗ್ರಾಮದ ರೈತ ರವೀಶ್ ಎಂಬುವರು ತಮ್ಮ ಮನೆಯಲ್ಲಿ ಮೇಕೆಗಳನ್ನು ಪಾಲನೆ ಮಾಡುತ್ತಿದ್ದು, ಮೇಕೆಯೊಂದು ಎರಡು ಮರಿಗಳಿಗೆ ಜನ್ಮ ನೀಡಿದೆ. ಈ ಪೈಕಿ ಒಂದು ಮೇಕೆ ಮರಿಯು ಸಾಮಾನ್ಯವಾಗಿ ಜನಿಸಿದರೆ, ಮತ್ತೊಂದು ಮರಿಯೂ ವಿತ್ರವಾಗಿ ಜನಿಸಿದೆ. ಎರಡು ತಲೆ, ನಾಲ್ಕು ಕಣ್ಣು, ಎರಡು ಕಿವಿ, ಎರಡು ಬಾಯಿಯೊಂದಿಗೆ ಜನಿಸಿದ್ದು, ಇದನ್ನು ಕಂಡು ಮಾಲೀಕರು ಸೇರಿದಂತೆ ಸ್ಥಳೀಯರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

ವಿಚಿತ್ರವಾಗಿ ಜನಿಸಿದರೂ ಅದರ ದೇಹ ಮಾತ್ರ ಸಾಮಾನ್ಯವಾಗಿದೆ. ಜೊತೆಗೆ ಸಾಮಾನ್ಯ ಮೇಕೆಯಂತೆ ಆರೋಗ್ಯವಾಗಿದೆ. ಹಾಲು ಕುಡಿಯುವಾಗ ಎರಡು ಬಾಯಿಯಿಂದಲೂ ಹಾಲು ಕುಡಿಯುತ್ತಿದೆ ಇಂತಹದ್ದೊಂದು ವಿಚಿತ್ರ ಮೇಕೆ ಜನಿಸಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ಈ ಮೇಕೆಮರಿ ನೋಡಲು ಜನ ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ ಎಂದು ಮೇಕೆ ಮಾಲೀಕ ರವೀಶ್ ಹೇಳಿದರು.

ಆಂದೋಲನ ಡೆಸ್ಕ್

Recent Posts

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

26 mins ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

2 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

3 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

7 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

10 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

10 hours ago