ಮೈಸೂರು

ನಂಜನಗೂಡು| ಗೊದ್ದನಪುರ ಗ್ರಾಮದಲ್ಲಿ ಸ್ಮಶಾನಕ್ಕಾಗಿ ಗೋಳಾಟ: ಶವಸಂಸ್ಕಾರಕ್ಕೆ ಗ್ರಾಮಸ್ಥರ ನರಳಾಟ

ಮೈಸೂರು: ನೋವಿನ ಸಂಕಟದಲ್ಲೂ ಶವ ಸಂಸ್ಕಾರಕ್ಕೆ ಸ್ಮಶಾನ ಇಲ್ಲದೆ ಗ್ರಾಮದ ಜನರು ಪರದಾಟ ನಡೆಸಿರುವ ಘಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಗೊದ್ದನಪುರ ಗ್ರಾಮದಲ್ಲಿ ನಡೆದಿದೆ.

ಸುಮಾರು 2500‌ಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಗೊದ್ದನಪುರ ಗ್ರಾಮದಲ್ಲಿ ಎಲ್ಲಾ ಸಮುದಾಯದ ಜನರು ವಾಸಿಸುತ್ತಿದ್ದಾರೆ. ಆದರೆ, ಸ್ಮಶಾನಕ್ಕೆ ಭೂಮಿ ಇಲ್ಲದೆ ಕಪಿಲಾ ನದಿಯ ದಡದ ಕೆಸರಿನಲ್ಲಿ ಹೂಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ದಲಿತರಿಗೆ ಶವ ಸಂಸ್ಕಾರ ಮಾಡಲು ಭೂಮಿ ಇಲ್ಲದೆ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಶವ ಸಂಸ್ಕಾರಕ್ಕೆ ದಾರಿ ಇಲ್ಲದೆ ಕೊಳಚೆ ನೀರಿನಲ್ಲಿಯೇ ಶವಹೊತ್ತುಕೊಂಡು ನಡೆದುಕೊಂಡು ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಕಳೆದ 20 ವರ್ಷಗಳಿಂದ ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ‌ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಗೊದ್ದನಪುರ ಗ್ರಾಮದ ಸರ್ವೆ ನಂಬರ್ 34 ಮತ್ತು 70ರಲ್ಲಿ ಸರ್ಕಾರಿ ಭೂಮಿ ಇದೆ. ಇದರಲ್ಲಿ ಎರಡು ಎಕರೆ ಭೂಮಿಯನ್ನು ಸ್ಮಶಾನಕ್ಕೆ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೂ ಇದುವರೆಗೂ ಮಾತ್ರ ಕ್ಯಾರೆ ಎಂದಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

4 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

5 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

5 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

6 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

7 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

11 hours ago