ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಗ್ರಾಮದ ಯುವಕರೊಬ್ಬರು ಗ್ರಾಮಕ್ಕೆ ತೆರಳುವ ವೇಳೆ ರಸ್ತೆ ಮಧ್ಯೆ ಚಿರತೆ ಕಾಣಿಸಿಕೊಂಡಿದೆ. ಅದನ್ನು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದು, ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.
ರೈತ ಮುಖಂಡ ಕೆಂಪಣ್ಣ ಮಾತನಾಡಿ, ಅರಣ್ಯ ಅಧಿಕಾರಿಗಳು ತಕ್ಷಣ ಚಿರತೆಯನ್ನು ಸೆರೆಹಿಡಿದು ರೈತರಿಗೆ ನಿರಾತಂಕವಾಗಿ ಓಡಾಡಲು ಅನುಕೂಲ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.





