ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶ್ರೀ ಮಾಳೀಗೇಶ್ವರಿ ದೇವಾಲಯದ ಸಮೀಪದ ಚಿಕ್ಕ ನಾಲೆಯಲ್ಲಿ ಗಂಡು ಮಗುವಿನ ಮೃತದೇಹ ಪತ್ತೆಯಾಗಿದೆ. ಮಗುವಿಗೆ ಜನ್ಮ ನೀಡಿದ ತಾಯಿಯೇ ಶಿಶುವನ್ನು ನಾಲೆಗೆ ಎಸೆದು ಹೋಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಸ್ಥಳೀಯರು ಮಗುವಿನ ಶವ ಕಂಡು ತಕ್ಷಣ ಬಿಳಿಗೆರೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಮಾಹಿತಿ ಪಡೆದ ಬಿಳಿಗೆರೆ ಪೊಲೀಸ್ ಠಾಣೆಯ ಪಿಎಸ್ಐ ಕರಿಬಸಪ್ಪ ಮತ್ತು ಸಿಡಿಪಿಒ ರಾಘವೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಾಲೆಯಿಂದ ಶಿಶುವಿನ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…
ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…
ಕಟ್ಟಡವನ್ನು ಜೀರ್ಣೋದ್ಧಾರ ಮಾಡಬೇಕೋ? ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಬೇಕೋ? ಸುಪ್ರೀಂ ತೀರ್ಪು ಎದುರು ನೋಡುತ್ತಿರುವ ಪಾಲಿಕೆ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು :…
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…