ಮೈಸೂರು

ನಂಜನಗೂಡು | ದುಷ್ಕರ್ಮಿಗಳಿಂದ ಶಿವಲಿಂಗ, ನಂದಿ ಬಸವ ಭಗ್ನ

ಅನ್ಯಧರ್ಮಿಯರಿಗೆ ದೇವಾಲಯದ ಜಾಗ ಪರಭಾರೆ; ಘಟನಾ ಸ್ಥಳಕ್ಕೆ ಮಾಜಿ ಶಾಸಕ ಹರ್ಷವರ್ಧನ್ ಭೇಟಿ

ನಂಜನಗೂಡು : ಸತಿ-ಪತಿಗಳಾದವರು ಕಡ್ಡಾಯವಾಗಿ ಉದ್ಭವ ಮೂರ್ತಿ ಶಿವಲಿಂಗ ಮತ್ತು ನಂದಿ ಬಸವ ಬಳಿ ತೆರಳಿ ಆಶೀರ್ವಾದ ಪಡೆದು ಗ್ರಾಮ ಪ್ರವೇಶ ಮಾಡುವುದು ಸಂಪ್ರದಾಯವಾಗಿದೆ. ಆದರೆ ಕೆಲವು ತಿಂಗಳ ಹಿಂದೆ ದುಷ್ಕರ್ಮಿಗಳು ಈ ನಂದಿ ಬಸವ ಮತ್ತು ಉದ್ಭವ ಶಿವಲಿಂಗ ಮೂರ್ತಿಗಳನ್ನು ಭಗ್ನಗೊಳಿಸಿದ್ದಾರೆ. ದೇವರ ಮೂರ್ತಿ ಇರುವ ಈ ಜಾಗವನ್ನು ಅನ್ಯ ಧರ್ಮಿಯರು ಆಕ್ರಮಿಸಿಕೊಂಡಿದ್ದು, ಈಗ ಸತಿ ಪತಿಗಳ ಪೂಜಾ ಕೈಂಕರ್ಯಕ್ಕೆ ದಿಗ್ಬಂಧನ ವಿಧಿಸುತ್ತಿರುವ ಘಟನೆ ನಂಜನಗೂಡು ತಾಲ್ಲೂಕಿನ ಬಂಕಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಇದನ್ನೂ ಓದಿ:-ನಾಗರಿಕತೆ ಬೆಳೆದದ್ದು-ಉಳಿದಿರುವುದು ನೀರಿನಿಂದಲೇ : ಸಿಎಂ ಸಿದ್ದರಾಮಯ್ಯ

ಸಾವಿರಾರು ವರ್ಷಗಳ ಇತಿಹಾಸವಿರುವ ಶಿವಲಿಂಗ ಕೂಡ ಭಗ್ನವಾಗಿದ್ದು, ಪಕ್ಕದ ನಂದಿ ಬಸವನ ತಲೆ ಭಾಗವೂ ಮುರಿದು ಬಿದ್ದಿದೆ. ೧೯೮೨-೮೩ರಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಅನ್ಯಧರ್ಮಿಯ ವ್ಯಕ್ತಿಗೆ ಈ ಜಾಗವನ್ನು ಅನಧಿಕೃತವಾಗಿ ಖಾತೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ. ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿರುವ ಗ್ರಾಮದ ನೂತನ ಸತಿ-ಪತಿಗಳ ಸಾಂಪ್ರದಾಯದ ಪೂಜೆಗೆ ಎಳ್ಳು ನೀರು ಬಿಡಲು ಮುಂದಾಗಿರುವ ಅನ್ಯಕೋಮಿನ ವ್ಯಕ್ತಿಯ ವಿರುದ್ಧ ಈಗ ಬಂಕಹಳ್ಳಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಂಕಹಳ್ಳಿಯ ಗ್ರಾಮಸ್ಥರು ಮಾಜಿ ಶಾಸಕ ಬಿ.ಹರ್ಷವರ್ಧನ್‌ರವರ ಗಮನಕ್ಕೆ ಈ ವಿಚಾರ ಮುಟ್ಟಿಸಿದ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಅವರು, ಕಿಡಿಗೇಡಿಗಳಿಂದ ಭಗ್ನಗೊಂಡಿರುವ ನಂದಿ ಬಸವ ಮತ್ತು ಶಿವಲಿಂಗ ಉದ್ಭವ ಮೂರ್ತಿಗಳನ್ನು ವೀಕ್ಷಿಸಿ ಜನರ ಧಾರ್ಮಿಕ ಭಾವನೆಗಳ ರಕ್ಷಣೆಗೆ ನಾವು ಸದಾ ಬದ್ಧವಾಗಿದ್ದೇವೆ. ಇಲ್ಲಿಯ ದೃಶ್ಯಾವಳಿಗಳನ್ನು ನೋಡಿದರೆ ಇದು ೧೪ ಮತ್ತು ೧೫ನೇ ಶತಮಾನದ ಉದ್ಭವ ಮೂರ್ತಿಗಳಾಗಿವೆ. ಗ್ರಾಮಸ್ಥರು ಪರವಾಗಿ ನಿಲ್ಲುತ್ತೇನೆ. ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಉದ್ಭವಮೂರ್ತಿ ಶಿವಲಿಂಗ ಮತ್ತು ನಂದಿ ಬಸವ ಇರುವ ಸ್ಥಳದಲ್ಲಿ ನೂತನ ದೇವಾಲಯ ನಿರ್ಮಾಣ ಮಾಡಬೇಕು ಎಂದು ಗ್ರಾಮಸ್ಥರಿಗೆ ಮಾಜಿ ಶಾಸಕ ಬಿ.ಹರ್ಷವರ್ಧನ್ ಸಲಹೆ ನೀಡಿದರು.

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

37 mins ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

3 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

3 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

4 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

7 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

7 hours ago