ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ.
ತಾಲ್ಲೂಕಿನ ಚಿಕ್ಕಯ್ಯನಛತ್ರ ಹೋಬಳಿ ಕೇಂದ್ರದ ಜಯಪ್ರಕಾಶ್ ಎಂಬ ಸರ್ವೆಯರ್ ರೆಡ್ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.
ಕಡಕೊಳದ ನಾರಾಯಣ ಎಂಬವರಿಗೆ ಸೇರಿದ ೯ ಗುಂಟೆ ಜಮೀನು ಪೋಡಿ, ದುರಸ್ತಿ ಮಾಡಲು ೨ ಲಕ್ಷ ರೂ.ಗೆ ಡೀಲ್ ಆಗಿತ್ತು. ಮುಂಗಡವಾಗಿ ನಾರಾಯಣ ೮೦ ಸಾವಿರ ರೂ. ನೀಡಿದ್ದರು. ಉಳಿದ ೧.೨೦ ಲಕ್ಷ ರೂ. ಹಣಕ್ಕೆ ಜಯಪ್ರಕಾಶ್ ಡಿಮ್ಯಾಂಡ್ ಮಾಡಿದ್ದರು. ಅಧಿಕಾರಿಯ ವರ್ತನೆಗೆ ಬೇಸತ್ತಿದ್ದ ನಾರಾಯಣ್ ಲೋಕಾಯುಕ್ತ ಪೊಲೀಸರ ಮೊರೆ ಹೋದರು ಎನ್ನಲಾಗಿದೆ.
ಹಣ ನೀಡಲು ಮೈಸೂರಿನ ಮೈಲಾರಿ ಹೋಟೆಲ್ಅನ್ನು ಅಯ್ಕೆ ಮಾಡಿಕೊಂಡ ನಾರಾಯಣ, ಅಲ್ಲಿ ಹಣ ನೀಡುವ ವೇಳೆಗೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಗುರುವಾರ ಜಯಪ್ರಕಾಶ ಲಂಚದ ಹಣ ಪಡೆಯುವಾಗಲೇ ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು, ಅತನನ್ನು ರೆಡ್ಹ್ಯಾಂಡಾಗಿ ವಶಕ್ಕೆ ಪಡೆದು ಇದೀಗ ನಂಜನಗೂಡು ತಾಲ್ಲೂಕು ಕಚೇರಿಯಲ್ಲಿ ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…