ನಂಜನಗೂಡು : ಟಾಟಾ ಏಸ್ ಹಾಲಿನ ವಾಹನ ಪಲ್ಟಿಯಾದ ಪರಿಣಾಮ ಸರ್ಕಾರಿ ಶಾಲಾ ಮಕ್ಕಳಿಗೆ ಗಾಯಗಳಾಗಿದ್ದು, ಈ ಘಟನೆ ಹೆಡಿಯಾಲ ಸಮೀಪ ಈರೇಗೌಡನಹುಂಡಿ ಗ್ರಾಮದಲ್ಲಿ ನಡೆದಿದೆ.
ಗಾಯಗೊಂಡ ಮಕ್ಕಳನ್ನ ಮೈಸೂರಿನ ಕೆ.ಆರ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲಿಸಲಾಗಿದೆ.
ಬೆಳ್ಳಂಬೆಳಿಗ್ಗೆ ಬಳ್ಳೂರು ಹುಂಡಿ, ನಾಗಣಪುರ ಕಾಲೋನಿಯ ಮಾರ್ಗವಾಗಿ ಶಾಲಾ ಮಕ್ಕಳು ಹೆಡಿಯಾಲ ಪ್ರೌಢ ಶಾಲೆಗೆ ತೆರಳುವ ಸಲುವಾಗಿ ನಾಲ್ಕು ಚಕ್ರದ ಟಾಟಾ ಏಸ್ ಹಾಲಿನ ವಾಹನ ಹತ್ತಿದ್ದಾರೆ. ಚಾಲಕನ ನಿರ್ಲಕ್ಷತನಕ್ಕೆ ವಾಹನ ಪಲ್ಟಿಯಾಗಿದ್ದು, ಇದರಲ್ಲಿ ಬಳ್ಳೂರು ಹುಂಡಿ ಗ್ರಾಮದ ಇಬ್ಬರು ಸೇರಿ 9 ಶಾಲಾ ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಸಾರ್ವಜನಿಕರು ಆಂಬುಲೆನ್ಸ್ ಮೂಲಕ ಮೈಸೂರಿನ ಕೆಆರ್ ಆಸ್ಪತ್ರೆಗೆ ಗಾಯಾಳುಗಳನ್ನು ರವಾನಿಸಿದ್ದಾರೆ.
ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್ ಕರಕಿಕಟ್ಟೆ ಹಾಗೂ ದೊಡ್ಡಯ್ಯ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ವಾಹನವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಾಹನ ಚಾಲಕನ ನಿರ್ಲಕ್ಷತನದಿಂದ ಈ ಅಪಘಾತ ಸಂಭವಿಸಿದ್ದು ಚಾಲಕ ಸ್ಥಳದಿಂದ ನಾಪತ್ತೆಯಾಗಿದ್ದಾನೆ.
ಡೆಹರಾಡೂನ್: ಕೇದಾರನಾಥ ಧಾಮಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಶೀಘ್ರದಲ್ಲೇ ತಣ್ಣೀರಿನ ಬದಲಿಗೆ 24 ಗಂಟೆಗಳ ಬಿಸಿನೀರಿನ ಪೂರೈಕೆಯನ್ನು ಒದಗಿಸಲಾಗುವುದು ಎಂದು…
ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.…
ಸರಗೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ…
ಅರ್ಧ ಶತಮಾನಕ್ಕೂ ಹಿಂದಿನ ಕಾಲದ ಚಿತ್ರಗಳು ಓ.ಎಲ್.ನಾಗಭೂಷಣ ಸ್ವಾಮಿ ದೇವನೂರ ಮಹಾದೇವ ಕನ್ನಡಿಗರ ಮನಸಿನಲ್ಲಿ ಮನೆ ಮಾಡಿರುವವರು. ಒಬ್ಬೊಬ್ಬರೂ ಮಹಾದೇವರ…
ದೇಮ ಎಂಬ ನೈತಿಕ ಕೈಮರ ಸುರೇಶ ಕಂಜರ್ಪಣೆ ಅಂದಕಾಲತ್ತಿಲೇ ನಾನು ಅರಕಲಗೂಡಲ್ಲಿ ಪಾಠ ಮಾಡುತ್ತಿದ್ದಾಗ ಅಲ್ಲಿನ ದೇವಸ್ಥಾನದಲ್ಲಿ ಶಿವರಾತ್ರಿಯಂದು ನಡೆದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅಂತರ್ಜಲ ಮಟ್ಟ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮಳೆಯ ನೀರು ಸಂಗ್ರಹಿಸಲು…