ಮೈಸೂರು

ನಂಜನಗೂಡು: ಟಾಟಾ ಏಸ್ ಪಲ್ಟಿ; ಶಾಲಾ ಮಕ್ಕಳಿಗೆ ಗಾಯ

ನಂಜನಗೂಡು : ಟಾಟಾ ಏಸ್ ಹಾಲಿನ ವಾಹನ ಪಲ್ಟಿಯಾದ ಪರಿಣಾಮ ಸರ್ಕಾರಿ ಶಾಲಾ ಮಕ್ಕಳಿಗೆ ಗಾಯಗಳಾಗಿದ್ದು, ಈ ಘಟನೆ ಹೆಡಿಯಾಲ ಸಮೀಪ ಈರೇಗೌಡನಹುಂಡಿ ಗ್ರಾಮದಲ್ಲಿ ನಡೆದಿದೆ.

ಗಾಯಗೊಂಡ ಮಕ್ಕಳನ್ನ ಮೈಸೂರಿನ ಕೆ.ಆರ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲಿಸಲಾಗಿದೆ.

ಬೆಳ್ಳಂಬೆಳಿಗ್ಗೆ ಬಳ್ಳೂರು ಹುಂಡಿ, ನಾಗಣಪುರ ಕಾಲೋನಿಯ ಮಾರ್ಗವಾಗಿ ಶಾಲಾ ಮಕ್ಕಳು ಹೆಡಿಯಾಲ ಪ್ರೌಢ ಶಾಲೆಗೆ ತೆರಳುವ ಸಲುವಾಗಿ ನಾಲ್ಕು ಚಕ್ರದ ಟಾಟಾ ಏಸ್ ಹಾಲಿನ ವಾಹನ ಹತ್ತಿದ್ದಾರೆ. ಚಾಲಕನ ನಿರ್ಲಕ್ಷತನಕ್ಕೆ ವಾಹನ ಪಲ್ಟಿಯಾಗಿದ್ದು, ಇದರಲ್ಲಿ ಬಳ್ಳೂರು ಹುಂಡಿ ಗ್ರಾಮದ ಇಬ್ಬರು ಸೇರಿ 9 ಶಾಲಾ ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಸಾರ್ವಜನಿಕರು ಆಂಬುಲೆನ್ಸ್ ಮೂಲಕ ಮೈಸೂರಿನ ಕೆಆರ್ ಆಸ್ಪತ್ರೆಗೆ ಗಾಯಾಳುಗಳನ್ನು ರವಾನಿಸಿದ್ದಾರೆ.

ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್ ಕರಕಿಕಟ್ಟೆ ಹಾಗೂ ದೊಡ್ಡಯ್ಯ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ವಾಹನವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಾಹನ ಚಾಲಕನ ನಿರ್ಲಕ್ಷತನದಿಂದ ಈ ಅಪಘಾತ ಸಂಭವಿಸಿದ್ದು ಚಾಲಕ ಸ್ಥಳದಿಂದ ನಾಪತ್ತೆಯಾಗಿದ್ದಾನೆ.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

10 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

10 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

10 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

10 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

10 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

11 hours ago