ಮೈಸೂರು

ನಂಜನಗೂಡು: ಮಡುವಿನಹಳ್ಳಿ ಗ್ರಾಮದಲ್ಲಿ ಹುಲಿ ಪ್ರತ್ಯಕ್ಷ: ಭಯಭೀತರಾದ ಗ್ರಾಮಸ್ಥರು

ನಂಜನಗೂಡು: ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದ ಸುತ್ತ ಮುತ್ತ ಭಾರೀ ಗಾತ್ರದ ಹುಲಿಯೊಂದು ಕಾಣಿಸಿಕೊಂಡಿದ್ದು, ರೈತರು ಆತಂಕಕ್ಕೀಡಾಗಿದ್ದಾರೆ.

ಹುಲಿ ಓಡಾಡುವ ದೃಶ್ಯ ರೈತ ಮಲ್ಲಿಕ್‌ ಎಂಬುವವರ ಜಮೀನಿನಲ್ಲಿ ಅಳವಡಿಸಿರುವ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮಡುವಿನಹಳ್ಳಿ, ಹೊಸವೀಡು, ಈರೇಗೌಡನಹುಂಡಿ, ಚಿಲಕಳ್ಳಿ, ಯಡಿಯಾಲ ಸುತ್ತ ಮುತ್ತ ಅಳವಡಿಸಿರುವ ಕ್ಯಾಮರಾಗಳಲ್ಲಿ ಸುಮಾರು ಐದಾರು ಹುಲಿಗಳ ಸಂಚಾರ ಕಂಡುಬರುತ್ತಿದ್ದು, ಆ ಭಾಗದ ರೈತರು ತೀವ್ರ ಆತಂಕಕ್ಕೊಳಗಾಗಿದ್ದಾರೆ.

ಯಡಿಯಾಲದಲ್ಲಿರುವ ವಲಯ ಅರಣ್ಯ ಅಧಿಕಾರಿಗಳು ತಮ್ಮ ಕುರ್ಚಿ ಕಾದಾಟವನ್ನು ಬದಿಗಿರಿಸಿ ಈ ಹುಲಿಗಳನ್ನು ಸೆರೆ ಹಿಡಿದು ಜನ ಜಾನುವಾರಗಳ ರಕ್ಷಣೆಗೆ ಮುಂದಾಗಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇನ್ನು ಹೆಡಿಯಾಲದಲ್ಲಿರುವ 2 ರಿಂದ 3 ಅರಣ್ಯ ಇಲಾಖೆಯ ವಾಹನಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಅವಶ್ಯಕವಾಗಿರುವ ಯಾವುದೇ ರೀತಿಯ ರಕ್ಷಣಾ ಕವಚ ಇಲ್ಲವಾಗಿದೆ. ಹಾಗಾಗಿ ಅವರಿಗೂ ಜೀವ ಭಯ ಕಾಡುತ್ತಿದ್ದು, ರಾತ್ರಿಯ ವೇಳೆಗೆ ಗಸ್ತಿಗೆ ಹೋದರೆ ಓಬಿರಾಯನ ಕಾಲದ ಈ ವಾಹನ ಸುರಕ್ಷಿತವಾಗಿ ವಾಪಸ್ ಬರುವ ನಂಬಿಕೆಯೂ ಅಧಿಕಾರಿಗಳಿಗೆ ಇಲ್ಲವಾಗಿದೆ. ಇಂತಹ ವಾಹನಗಳಲ್ಲಿ ನಾವು ಗಸ್ತು ಮಾಡುವುದು ಹೇಗೆ ಎಂದು ಅಧಿಕಾರಿಗಳು ಅಳಲು ತೋಡಿಕೊಂಡಿದ್ದಾರೆ.

ಈ ಮಧ್ಯೆ ಇಲ್ಲಿನ ಅರಣ್ಯ ಇಲಾಖೆಯ ಅಧಿಕಾರಿಗಳಲ್ಲಿ ಕುರ್ಚಿ ಉಳಿಸಿಕೊಳ್ಳುವ, ಕಿತ್ತುಕೊಳ್ಳುವ ಹೋರಾಟ ಆರಂಭವಾಗಿದ್ದು, ಜನರ ರಕ್ಷಣೆ ಹೇಗೆ ಎಂಬುದು ರೈತರ ಪ್ರಶ್ನೆಯಾಗಿದೆ.

ಆಂದೋಲನ ಡೆಸ್ಕ್

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

7 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

10 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

11 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

12 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

13 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

17 hours ago