ನಂಜನಗೂಡು: ಕೌಟುಂಬಿಕ ಕಲಹ ಪತಿಯ ಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನ ಹುಂಡುವಿನಹಳ್ಳಿ ಬಡಾವಣೆ ಬಳಿ ನಡೆದಿದೆ.
ರಾಜೇಂದ್ರ ಕೊಲೆಯಾದ ವ್ಯಕ್ತಿಯಾಗಿದ್ದು, ಸಂಗೀತಾ ಪತಿಯನ್ನೇ ಕೊಲೆ ಮಾಡಿದ ಪತ್ನಿಯಾಗಿದ್ದಾಳೆ. ಸದ್ಯ ಸಂಗೀತಾ ಹಾಗೂ ಗ್ಯಾಂಗನ್ನು ಬಂಧಿಸಲಾಗಿದ್ದು, ಮಾಡಿದ ತಪ್ಪನ್ನು ಆಕೆ ಒಪ್ಪಿಕೊಂಡಿದ್ದಾಳೆ.
ಹುಂಡುವಿನಹಳ್ಳಿಯಲ್ಲಿ ಬೈಕ್ನಲ್ಲಿ ತೆರಳುತ್ತಿದ್ದ ರಾಜೇಂದ್ರ ಹಾಗೂ ಸಂಗೀತಾಳನ್ನು ಕಾರಿನಲ್ಲಿ ಬಂದ ಗ್ಯಾಂಗ್ ಅಡ್ಡಗಟ್ಟಿತ್ತು. ಈ ವೇಳೆ ಕಾರಿನಿಂದ ಇಳಿದುಬಂದ ವ್ಯಕ್ತಿಯೊಬ್ಬ ರಾಜೇಂದ್ರ ಜೊತೆ ಜಗಳ ಮಾಡಿದ್ದಾನೆ. ಸಂಗೀತ ಕತ್ತಿನಲ್ಲಿದ್ದ ಚೈನ್ ಕಿತ್ತುಕೊಳ್ಳಲು ಯತ್ನಿಸಿದ್ದಾನೆ. ಹರಿತವಾದ ಆಯುಧದಿಂದ ರಾಜೇಂದ್ರನಿಗೆ ತಿವಿದಿದ್ದಾನೆ. ಇದೇ ವೇಳೆ ಮತ್ತೊಂದು ವಾಹನ ಬಂದಿದ್ದರಿಂದ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ.
ಗಂಭೀರವಾಗಿ ಗಾಯಗೊಂಡಿದ್ದ ರಾಜೇಂದ್ರ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಾಜೇಂದ್ರ ಸಾವನ್ನಪ್ಪಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರಿಗೆ ಇದು ಕೊಲೆ ಎಂಬುದು ಗೊತ್ತಾಗಿದೆ. ಆರೋಪಿಗಳನ್ನು ಹಿಡಿದು ವಿಚಾರಣೆ ನಡೆಸಿದಾಗ ಪತ್ನಿ ಸಂಗೀತಾಳೆ ದರೋಡೆ ನೆಪದಲ್ಲಿ ಪತಿ ಕೊಲೆ ಮಾಡಿಸಿದ್ದ ವಿಚಾರ ಬಯಲಾಗಿದೆ.
ಈ ಕೃತ್ಯದಲ್ಲಿ ಓರ್ವ ಅಪ್ರಾಪ್ತ ಕೂಡ ಭಾಗಿಯಾಗಿದ್ದಾನೆ. ಸದ್ಯ ಸಂಗೀತಾ, ಸಂಜಯ್, ಇನ್ನೋರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಕೃತ್ಯಕ್ಕೆ ಬಳಸಿದ್ದ ಬಾರಿಗೆ ಕಾರನ್ನು ವಶಕ್ಕೆ ಪಡೆಯಲಾಗಿದೆ.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…