ಮೈಸೂರು

ನಂಜನಗೂಡು| ಪತಿಯನ್ನೇ ಹತ್ಯೆಗೈದ ಪತ್ನಿ ಅರೆಸ್ಟ್‌

ನಂಜನಗೂಡು: ಕೌಟುಂಬಿಕ ಕಲಹ ಪತಿಯ ಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನ ಹುಂಡುವಿನಹಳ್ಳಿ ಬಡಾವಣೆ ಬಳಿ ನಡೆದಿದೆ.

ರಾಜೇಂದ್ರ ಕೊಲೆಯಾದ ವ್ಯಕ್ತಿಯಾಗಿದ್ದು, ಸಂಗೀತಾ ಪತಿಯನ್ನೇ ಕೊಲೆ ಮಾಡಿದ ಪತ್ನಿಯಾಗಿದ್ದಾಳೆ. ಸದ್ಯ ಸಂಗೀತಾ ಹಾಗೂ ಗ್ಯಾಂಗನ್ನು ಬಂಧಿಸಲಾಗಿದ್ದು, ಮಾಡಿದ ತಪ್ಪನ್ನು ಆಕೆ ಒಪ್ಪಿಕೊಂಡಿದ್ದಾಳೆ.

ಹುಂಡುವಿನಹಳ್ಳಿಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ರಾಜೇಂದ್ರ ಹಾಗೂ ಸಂಗೀತಾಳನ್ನು ಕಾರಿನಲ್ಲಿ ಬಂದ ಗ್ಯಾಂಗ್‌ ಅಡ್ಡಗಟ್ಟಿತ್ತು. ಈ ವೇಳೆ ಕಾರಿನಿಂದ ಇಳಿದುಬಂದ ವ್ಯಕ್ತಿಯೊಬ್ಬ ರಾಜೇಂದ್ರ ಜೊತೆ ಜಗಳ ಮಾಡಿದ್ದಾನೆ. ಸಂಗೀತ ಕತ್ತಿನಲ್ಲಿದ್ದ ಚೈನ್‌ ಕಿತ್ತುಕೊಳ್ಳಲು ಯತ್ನಿಸಿದ್ದಾನೆ. ಹರಿತವಾದ ಆಯುಧದಿಂದ ರಾಜೇಂದ್ರನಿಗೆ ತಿವಿದಿದ್ದಾನೆ. ಇದೇ ವೇಳೆ ಮತ್ತೊಂದು ವಾಹನ ಬಂದಿದ್ದರಿಂದ ಸ್ಥಳದಿಂದ ಎಸ್ಕೇಪ್‌ ಆಗಿದ್ದಾನೆ.

ಗಂಭೀರವಾಗಿ ಗಾಯಗೊಂಡಿದ್ದ ರಾಜೇಂದ್ರ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಾಜೇಂದ್ರ ಸಾವನ್ನಪ್ಪಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರಿಗೆ ಇದು ಕೊಲೆ ಎಂಬುದು ಗೊತ್ತಾಗಿದೆ. ಆರೋಪಿಗಳನ್ನು ಹಿಡಿದು ವಿಚಾರಣೆ ನಡೆಸಿದಾಗ ಪತ್ನಿ ಸಂಗೀತಾಳೆ ದರೋಡೆ ನೆಪದಲ್ಲಿ ಪತಿ ಕೊಲೆ ಮಾಡಿಸಿದ್ದ ವಿಚಾರ ಬಯಲಾಗಿದೆ.

ಈ ಕೃತ್ಯದಲ್ಲಿ ಓರ್ವ ಅಪ್ರಾಪ್ತ ಕೂಡ ಭಾಗಿಯಾಗಿದ್ದಾನೆ. ಸದ್ಯ ಸಂಗೀತಾ, ಸಂಜಯ್‌, ಇನ್ನೋರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಕೃತ್ಯಕ್ಕೆ ಬಳಸಿದ್ದ ಬಾರಿಗೆ ಕಾರನ್ನು ವಶಕ್ಕೆ ಪಡೆಯಲಾಗಿದೆ.

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

10 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

18 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

18 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

18 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

21 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

21 hours ago