ಮೈಸೂರು: ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಕುರಿ ಬಲಿಯಾಗಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಗ್ರಾಮದ ರೈತ ಮಹಿಳೆ ರಾಜಮ್ಮ ಎಂಬುವವರಿಗೆ ಸೇರಿದ ಕುರಿ ಮರಿ ಬಲಿಯಾಗಿರುವುದು. ರಾಜಮ್ಮ ಎಂದಿನಂತೆ ಕುರಿಯನ್ನು ಮೇಯಿಸಿಕೊಂಡು ಸಂಜೆ ವೇಳೆ ಮನೆಯತ್ತ ವಾಪಸ್ಸಾಗುವ ವೇಳೆ ಊರಿನಂಚಿನಲ್ಲಿರುವ ಕೆರೆ ಬಳಿ ಚಿರತೆಯು ಕುರಿ ಮೇಲೆರಗಿದೆ. ಈ ವೇಳೆ ಅಲ್ಲೇ ಇದ್ದ ಗ್ರಾಮಸ್ಥರು ಕೂಗಾಡಿದ ನಂತರ ಚಿರತೆ ಕುರಿಯ ಕಳೇಬರವನ್ನು ಅಲ್ಲೇ ಬಿಟ್ಟು ಹೋಗಿದೆ.
ಗ್ರಾಮದಲ್ಲಿ ಪದೇ ಪದೇ ಜಾನುವಾರುಗಳ ಮೇಲೆ ಚಿರತೆ ದಾಳಿಗಳು ನಡೆಯುತ್ತಿದೆ. ಇದರಿಂದ ಗ್ರಾಮದ ರೈತರು ಜಾನುವಾರುಗಳನ್ನು ಮೇಯಿಸುವುದಕ್ಕೆ ಹೋಗಲು ಭಯಬೀತರಾಗಿದ್ದಾರೆ. ಅರಣ್ಯ ಅಧಿಕಾರಿಗಳು ಕಾಡುಪ್ರಾಣಿಗಳ ಹಾವಳಿ ತಪ್ಪಿಸಲು ನಿರ್ಲಕ್ಷ ವಹಿಸಿರುವುದರಿಂದಲೇ ಇಂತಹ ಘಟನೆಗಳು ಆಗಾಗ್ಗೆ ನಡೆಯುತ್ತಿದೆ ಎಂದು ಗ್ರಾಮದ ಸುರೇಶ್ ತಿಳಿಸಿದ್ದಾರೆ.
ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ…
ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…
ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…
ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…
ಬೆಂಗಳೂರು: ನಾಳೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ…