ಮೈಸೂರು

ನಂಜನಗೂಡು | ಚಿರತೆ ದಾಳಿಗೆ ಕುರಿ ಬಲಿ

ಮೈಸೂರು: ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಕುರಿ ಬಲಿಯಾಗಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.

ಗ್ರಾಮದ ರೈತ ಮಹಿಳೆ ರಾಜಮ್ಮ ಎಂಬುವವರಿಗೆ ಸೇರಿದ ಕುರಿ ಮರಿ ಬಲಿಯಾಗಿರುವುದು. ರಾಜಮ್ಮ ಎಂದಿನಂತೆ ಕುರಿಯನ್ನು ಮೇಯಿಸಿಕೊಂಡು ಸಂಜೆ ವೇಳೆ ಮನೆಯತ್ತ ವಾಪಸ್ಸಾಗುವ ವೇಳೆ ಊರಿನಂಚಿನಲ್ಲಿರುವ ಕೆರೆ ಬಳಿ ಚಿರತೆಯು ಕುರಿ ಮೇಲೆರಗಿದೆ. ಈ ವೇಳೆ ಅಲ್ಲೇ ಇದ್ದ ಗ್ರಾಮಸ್ಥರು ಕೂಗಾಡಿದ ನಂತರ ಚಿರತೆ ಕುರಿಯ ಕಳೇಬರವನ್ನು ಅಲ್ಲೇ ಬಿಟ್ಟು ಹೋಗಿದೆ.

ಗ್ರಾಮದಲ್ಲಿ ಪದೇ ಪದೇ ಜಾನುವಾರುಗಳ ಮೇಲೆ ಚಿರತೆ ದಾಳಿಗಳು ನಡೆಯುತ್ತಿದೆ. ಇದರಿಂದ ಗ್ರಾಮದ ರೈತರು ಜಾನುವಾರುಗಳನ್ನು ಮೇಯಿಸುವುದಕ್ಕೆ ಹೋಗಲು ಭಯಬೀತರಾಗಿದ್ದಾರೆ. ಅರಣ್ಯ ಅಧಿಕಾರಿಗಳು ಕಾಡುಪ್ರಾಣಿಗಳ ಹಾವಳಿ ತಪ್ಪಿಸಲು ನಿರ್ಲಕ್ಷ ವಹಿಸಿರುವುದರಿಂದಲೇ ಇಂತಹ ಘಟನೆಗಳು ಆಗಾಗ್ಗೆ ನಡೆಯುತ್ತಿದೆ ಎಂದು ಗ್ರಾಮದ ಸುರೇಶ್‌ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಂದುವರೆದ ಕಾಡಾನೆ ಹಾವಳಿ : ಒಂಟಿ ಸಲಗ ದಾಳಿಗೆ ಓರ್ವ ಬಲಿ

ರಾಮನಗರ : ರಾಜ್ಯದಲ್ಲಿ ಮಾನವ ಮತ್ತು ಕಾಡು ಪ್ರಾಣಿಗಳ ನಡುವಿನ ಸಂಘರ್ಷ ಮುಂದುವರಿದಿದ್ದು, ಒಂಟಿ ಸಲಗ ದಾಳಿದ ಓರ್ವ ವ್ಯಕ್ತಿ…

8 mins ago

ಟ್ರಂಪ್‌ ಗುರಿಯಾಗಿಸಿ ಗುಂಡಿನ ದಾಳಿಗೆ ಯತ್ನಿಸಿದ್ದು ಓರ್ವ ಶಿಕ್ಷಕ ! ಯಾರು ಈ ಥಾಮಸ್‌ ಅಲೆನ್‌

ವಾಷಿಂಗ್ಟನ್‌ : ವರದಿಗಾರರ ಔತಣಕೂಟದಲ್ಲಿ ಗುಂಡಿನ ದಾಳಿ ನಡೆಸಿದ್ದ ವ್ಯಕ್ತಿ ಅತಿಥಿಯಾಗಿ ಹೋಟೆಲ್‌ ಪ್ರವೇಶ ಮಾಡಿದ್ದ ವಿಚಾರ ಪ್ರಾಥಮಿಕ ತನಿಖೆಯಿಂದ…

45 mins ago

ಹನೂರು | ಬಾರದ ಮಳೆ ; ಮಳೆಗಾಗಿ ಮಕ್ಕಳ ವಿಶೇಷ ಪ್ರಾರ್ಥನೆ

ಹನೂರು : ಜನ ಜಾನುವಾರುಗಳಿಗೂ ಕುಡಿಯುವ ನೀರಿನ ತೊಂದರೆ ಉಂಟಾಗಿರುವ ಪರಿಣಾಮ ಗ್ರಾಮದಲ್ಲಿರುವ ಮಕ್ಕಳೆಲ್ಲರೂ ಸೇರಿ ಮಳೆರಾಯನಿಗೆ ಪ್ರಾರ್ಥನೆ ಮಾಡಿರುವಂತಹ…

1 hour ago

ಸ್ವಿಸ್‌ ವಿಮಾನದಲ್ಲಿ ಬೆಂಕಿ, 6 ಮಂದಿಗೆ ಗಾಯ ; ತಪ್ಪಿದ ದುರಂತ

ನವದೆಹಲಿ : ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 6 ಮಂದಿ ಗಾಯಗೊಂಡಿರುವ ಘಟನೆ…

2 hours ago

ಅಕ್ರಮ ಭೂ ಪರಿಹಾರ ವಿತರಣೆ ಸಾಬೀತು : ವಸೂಲಿಗೆ ಕ್ರಮವಹಿಸಲು ಆದೇಶ

ಮಂಡ್ಯ : ತಾಲೂಕಿನ ಬೂದನೂರು ಗ್ರಾಪಂ ವ್ಯಾಪ್ತಿಯ ಬ್ಯಾಂಕ್ ಕಾಲೋನಿ ಪಂಚಾಯತಿ ರಸ್ತೆಗೆ 41 ಲಕ್ಷ ರೂ ಅಕ್ರಮ ಪರಿಹಾರ…

2 hours ago

ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ : ಡಿ.ಕೆ.ಶಿವಕುಮಾರ್‌

ಬೆಂಗಳೂರು : ಯಾವಾಗ ಏನು ಆಗಬೇಕೋ ಅದು ಆಗುತ್ತದೆ. ಸಮಯ ಬಂದಾಗ ತಾನಾಗಿಯೇ ಗೊತ್ತಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…

2 hours ago