ಮೈಸೂರು: ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಕುರಿ ಬಲಿಯಾಗಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಗ್ರಾಮದ ರೈತ ಮಹಿಳೆ ರಾಜಮ್ಮ ಎಂಬುವವರಿಗೆ ಸೇರಿದ ಕುರಿ ಮರಿ ಬಲಿಯಾಗಿರುವುದು. ರಾಜಮ್ಮ ಎಂದಿನಂತೆ ಕುರಿಯನ್ನು ಮೇಯಿಸಿಕೊಂಡು ಸಂಜೆ ವೇಳೆ ಮನೆಯತ್ತ ವಾಪಸ್ಸಾಗುವ ವೇಳೆ ಊರಿನಂಚಿನಲ್ಲಿರುವ ಕೆರೆ ಬಳಿ ಚಿರತೆಯು ಕುರಿ ಮೇಲೆರಗಿದೆ. ಈ ವೇಳೆ ಅಲ್ಲೇ ಇದ್ದ ಗ್ರಾಮಸ್ಥರು ಕೂಗಾಡಿದ ನಂತರ ಚಿರತೆ ಕುರಿಯ ಕಳೇಬರವನ್ನು ಅಲ್ಲೇ ಬಿಟ್ಟು ಹೋಗಿದೆ.
ಗ್ರಾಮದಲ್ಲಿ ಪದೇ ಪದೇ ಜಾನುವಾರುಗಳ ಮೇಲೆ ಚಿರತೆ ದಾಳಿಗಳು ನಡೆಯುತ್ತಿದೆ. ಇದರಿಂದ ಗ್ರಾಮದ ರೈತರು ಜಾನುವಾರುಗಳನ್ನು ಮೇಯಿಸುವುದಕ್ಕೆ ಹೋಗಲು ಭಯಬೀತರಾಗಿದ್ದಾರೆ. ಅರಣ್ಯ ಅಧಿಕಾರಿಗಳು ಕಾಡುಪ್ರಾಣಿಗಳ ಹಾವಳಿ ತಪ್ಪಿಸಲು ನಿರ್ಲಕ್ಷ ವಹಿಸಿರುವುದರಿಂದಲೇ ಇಂತಹ ಘಟನೆಗಳು ಆಗಾಗ್ಗೆ ನಡೆಯುತ್ತಿದೆ ಎಂದು ಗ್ರಾಮದ ಸುರೇಶ್ ತಿಳಿಸಿದ್ದಾರೆ.
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ’ಕಾರ್ಪೊರೇಟ್ ಪರ’ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ…
ಬೆಂಗಳೂರು : ಕನ್ನಡದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿರುವ ಸಾಧು ಕೋಕಿಲಾ ಹಾಗೂ…
ಮೈಸೂರು: ಎಂಎಲ್ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್ ಮಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ…