ಮೈಸೂರು: ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಕುರಿ ಬಲಿಯಾಗಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಗ್ರಾಮದ ರೈತ ಮಹಿಳೆ ರಾಜಮ್ಮ ಎಂಬುವವರಿಗೆ ಸೇರಿದ ಕುರಿ ಮರಿ ಬಲಿಯಾಗಿರುವುದು. ರಾಜಮ್ಮ ಎಂದಿನಂತೆ ಕುರಿಯನ್ನು ಮೇಯಿಸಿಕೊಂಡು ಸಂಜೆ ವೇಳೆ ಮನೆಯತ್ತ ವಾಪಸ್ಸಾಗುವ ವೇಳೆ ಊರಿನಂಚಿನಲ್ಲಿರುವ ಕೆರೆ ಬಳಿ ಚಿರತೆಯು ಕುರಿ ಮೇಲೆರಗಿದೆ. ಈ ವೇಳೆ ಅಲ್ಲೇ ಇದ್ದ ಗ್ರಾಮಸ್ಥರು ಕೂಗಾಡಿದ ನಂತರ ಚಿರತೆ ಕುರಿಯ ಕಳೇಬರವನ್ನು ಅಲ್ಲೇ ಬಿಟ್ಟು ಹೋಗಿದೆ.
ಗ್ರಾಮದಲ್ಲಿ ಪದೇ ಪದೇ ಜಾನುವಾರುಗಳ ಮೇಲೆ ಚಿರತೆ ದಾಳಿಗಳು ನಡೆಯುತ್ತಿದೆ. ಇದರಿಂದ ಗ್ರಾಮದ ರೈತರು ಜಾನುವಾರುಗಳನ್ನು ಮೇಯಿಸುವುದಕ್ಕೆ ಹೋಗಲು ಭಯಬೀತರಾಗಿದ್ದಾರೆ. ಅರಣ್ಯ ಅಧಿಕಾರಿಗಳು ಕಾಡುಪ್ರಾಣಿಗಳ ಹಾವಳಿ ತಪ್ಪಿಸಲು ನಿರ್ಲಕ್ಷ ವಹಿಸಿರುವುದರಿಂದಲೇ ಇಂತಹ ಘಟನೆಗಳು ಆಗಾಗ್ಗೆ ನಡೆಯುತ್ತಿದೆ ಎಂದು ಗ್ರಾಮದ ಸುರೇಶ್ ತಿಳಿಸಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…