ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ತೊರವಳ್ಳಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಉಪಟಳ ನೀಡುತ್ತಿದ್ದ ಚಿರತೆಯೊಂದು ಬೋನಿಗೆ ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಗ್ರಾಮದ ಅಕ್ಕಪಕ್ಕ ಕಳೆದ ಕೆಲ ದಿನಗಳಿಂದ ಚಿರತೆ ಉಪಟಳ ನೀಡುತ್ತಾ ಸಾಕು ಪ್ರಾಣಿಗಳ ಮೇಲೆ ನಿರಂತರ ದಾಳಿ ನಡೆಸುತ್ತಾ ಬಂದಿತ್ತು. ಇದರಿಂದ ಭಯಭೀತರಾಗಿದ್ದ ಗ್ರಾಮಸ್ಥರು ಅರಣ್ಯ ಇಲಾಖೆಗೆ ಬೋನು ಅಳವಡಿಸುವಂತೆ ಮನವಿ ಮಾಡಿದ್ದರು. ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಅರಣ್ಯಾಧಿಕಾರಿಗಳು ಗ್ರಾಮದ ಹೊರವಲಯದಲ್ಲಿ ಬೋನು ಅಳವಡಿಸಿದ್ದರು. ಬೋನಿಗೆ ಒಳಗೆ ನಾಯಿಯನ್ನು ಇಟ್ಟಿದ್ದ ಪರಿಣಾಮ ಇಂದು ಚಿರತೆ ಬೋನಿಗೆ ಬಿದ್ದಿದೆ.
ಚಿರತೆ ಸೆರೆಯಾಗುತ್ತಿದ್ದಂತೆ ನೆಮ್ಮದಿಯ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು, ಈ ಭಾಗದಲ್ಲಿ ಇನ್ನೂ ಅನೇಕ ಚಿರತೆಗಳಿದ್ದು, ಅವುಗಳನ್ನು ಕೂಡ ಸೆರೆಹಿಡಿಯುವಂತೆ ಆಗ್ರಹಿಸಿದ್ದಾರೆ.
ಇನ್ನು ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಪಕ್ಕದ ದಾಸನೂರು ಎಂಬ ಗ್ರಾಮದಲ್ಲಿ ಎರಡು ಚಿರತೆಗಳು ಬೋನಿಗೆ ಬಿದ್ದಿದ್ದವು. ಈಗ ಮತ್ತೊಂದು ಚಿರತೆ ಬೋನಿಗೆ ಬಿದ್ದು ಲಾಕ್ ಆಗಿದ್ದು, ಇದನ್ನು ದೂರದ ಅರಣ್ಯಕ್ಕೆ ಬಿಡಲಾಗಿದೆ.
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್ನಲ್ಲಿ ಮೂಡಿಬಂದಿರುವ…
ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…
ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಮದುವೆ ಮುಂದೂಡಿಕೆಯಾಗಿತ್ತು.…
ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…