ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ತೊರವಳ್ಳಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಉಪಟಳ ನೀಡುತ್ತಿದ್ದ ಚಿರತೆಯೊಂದು ಬೋನಿಗೆ ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಗ್ರಾಮದ ಅಕ್ಕಪಕ್ಕ ಕಳೆದ ಕೆಲ ದಿನಗಳಿಂದ ಚಿರತೆ ಉಪಟಳ ನೀಡುತ್ತಾ ಸಾಕು ಪ್ರಾಣಿಗಳ ಮೇಲೆ ನಿರಂತರ ದಾಳಿ ನಡೆಸುತ್ತಾ ಬಂದಿತ್ತು. ಇದರಿಂದ ಭಯಭೀತರಾಗಿದ್ದ ಗ್ರಾಮಸ್ಥರು ಅರಣ್ಯ ಇಲಾಖೆಗೆ ಬೋನು ಅಳವಡಿಸುವಂತೆ ಮನವಿ ಮಾಡಿದ್ದರು. ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಅರಣ್ಯಾಧಿಕಾರಿಗಳು ಗ್ರಾಮದ ಹೊರವಲಯದಲ್ಲಿ ಬೋನು ಅಳವಡಿಸಿದ್ದರು. ಬೋನಿಗೆ ಒಳಗೆ ನಾಯಿಯನ್ನು ಇಟ್ಟಿದ್ದ ಪರಿಣಾಮ ಇಂದು ಚಿರತೆ ಬೋನಿಗೆ ಬಿದ್ದಿದೆ.
ಚಿರತೆ ಸೆರೆಯಾಗುತ್ತಿದ್ದಂತೆ ನೆಮ್ಮದಿಯ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು, ಈ ಭಾಗದಲ್ಲಿ ಇನ್ನೂ ಅನೇಕ ಚಿರತೆಗಳಿದ್ದು, ಅವುಗಳನ್ನು ಕೂಡ ಸೆರೆಹಿಡಿಯುವಂತೆ ಆಗ್ರಹಿಸಿದ್ದಾರೆ.
ಇನ್ನು ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಪಕ್ಕದ ದಾಸನೂರು ಎಂಬ ಗ್ರಾಮದಲ್ಲಿ ಎರಡು ಚಿರತೆಗಳು ಬೋನಿಗೆ ಬಿದ್ದಿದ್ದವು. ಈಗ ಮತ್ತೊಂದು ಚಿರತೆ ಬೋನಿಗೆ ಬಿದ್ದು ಲಾಕ್ ಆಗಿದ್ದು, ಇದನ್ನು ದೂರದ ಅರಣ್ಯಕ್ಕೆ ಬಿಡಲಾಗಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…