ಮಲ್ಕುಂಡಿ: ನಂಜನಗೂಡು ತಾಲೂಕಿನಲ್ಲಿ ಹುಲಿ ದಾಳಿ ಹೆಚ್ಚಾಗಿದ್ದು, ಸಾಕು ಪ್ರಾಣಿಗಳನ್ನು ಕೊಂದು ಹಾಕುತ್ತಿವೆ. ಇದರಿಂದ ಜನಸಾಮಾನ್ಯರು ಹೊರ ಓಡಾಡಲು ಭಯಪಡುವಂತಾಗಿದೆ. ಇದೀಗ, ಹಾಡಾಗಲೇ ಹುಲಿ ದಾಳಿಯಿಂದ ಹಸು ಬಲಿಯಾಗಿರುವ ಘಟನೆ ಬಳ್ಳೂರ ಹುಂಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರಾಜೇಶ್ ಎಂಬವರು ಸೋಮವಾರ ತಮ್ಮ ಜಮೀನಿನಲ್ಲಿ ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಪಕ್ಕದ ಪೊದೆಯಲ್ಲಿದ್ದ ಹುಲಿ ಹಸುವಿನ ಮೇಲೆ ಏಕಾಏಕಿ ದಾಳಿ ಮಾಡಿದೆ. ಈ ವೇಳೆ ಪಕ್ಕದಲ್ಲೇ ಕೆಲಸ ಮಾಡುತ್ತಿದ ರೈತರು ಕಿರುಚಾಡಿಕೊಂಡಿದ್ದಾರೆ, ಗಾಬರಿಗೊಂಡ ಹುಲಿ ಹಸುವನ್ನು ಕೊಂದು ಪರಾರಿಯಾಗಿದೆ. ಗಾಬರಿಕೊಂಡ ರೈತರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಗ್ರಾಪಂ ಉಪಾಧ್ಯಕ್ಷ ಬಿ.ಟಿ.ಕುಮಾರ್ ಮಾತನಾಡಿ, ಕಾಡಾಂಚಿನ ಗ್ರಾಮದಲ್ಲಿ ಕಾಡು ಪ್ರಾಣಿಗಳ ಹಾವಳಿ ಮಿತಿಮೀರಿದ್ದು, ರೈತರು ತಮ್ಮ ಜಮೀನುಗಳಿಗೆ ತೆರಳಿ ಕೆಲಸ ಮಾಡಲು ಭಯಬೀತರಾಗಿದ್ದಾರೆ. ಗ್ರಾಮದ ರಾಜೇಶ್ ಎಂಬವರ ಹಸುವನ್ನು ಹುಲಿ ಕೊಂದಿದ್ದು, ಇದರಿಂದ ಅವರು ಜೀವನ ನಡೆಸಲು ಕಷ್ಟವಾಗಿದೆ. ಅರಣ್ಯ ಇಲಾಖೆ ಅಽಕಾರಿಗಳು ತಕ್ಷಣ ಹುಲಿಯನ್ನು ಸೆರೆ ಹಿಡಿಯಬೇಕು, ಹಸುವಿನ ಮಾಲೀಕನಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…