ಮೈಸೂರು: ನಂಜನಗೂಡಿನ ಸುಜಾತಪುರಂ ಬಳಿಯ ರೈಲ್ವೇ ಮೇಲ್ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಲೋಡ್ ಟೆಸ್ಟ್ ಬಳಿಕ ಸದ್ಯದಲ್ಲೇ ಸಂಚಾರಕ್ಕೆ ಮುಕ್ತವಾಗಲಿದೆ.
ಆ ಮೂಲಕ ದಶಕಗಳ ಬೇಡಿಕೆಗಳಿಗೆ ಈಗ ಪ್ರತಿಫಲ ದೊರೆಯಲಿದೆ. ದಕ್ಷಿಣ ಕಾಶಿ ನಂಜನಗೂಡಿಗೆ ಬರುವ ಭಕ್ತರು, ಪ್ರವಾಸಿಗರು ಹಾಗೂ ಅಂತರರಾಜ್ಯ ಪ್ರಯಾಣಿಕರು ಈ ಹಾದಿಯಿಂದ ಸುಗಮ ಸಂಚಾರ ದೊರೆಲಿದೆ.
ಮೈಸೂರು-ಚಾಮರಾಜನಗರ ನಡುವೆ ರೈಲುಗಳ ಸಂಖ್ಯೆ ಹೆಚ್ಚಾಗಿದ್ದು, ನಂಜನಗೂಡಿನ ಸುಜಾತಪುರಂ ರೈಲ್ವೇ ಗೇಟ್ ಬಳಿ ವಾಹನಗಳು ನಿಲ್ಲುತ್ತಿದ್ದರಿಂದ ಹೆದ್ದಾರಿಯಲ್ಲಿನ ಸಂಚಾರಕ್ಕೂ ಅಡ್ಡಿಯಾಗುತ್ತಿತ್ತು. ಜತೆಗೆ ಪದೇಪದೆ ಗೇಟ್ ಹಾಕುತ್ತಿದ್ದರಿಂದ ಸವಾರರು ರೋಸಿದ್ದರು. ಹಾಗಾಗಿ ದಶಕಗಳಿಂದ ಮೇಲ್ಸೇತುವೆಗಾಗಿ ಸಾಕಷ್ಟು ಪ್ರತಿಭಟನೆಗಳು ನಡೆದಿದ್ದವು. ಸ್ಥಳೀಯ ಜನಪ್ರತಿನಿಧಿ, ಅಧಿಕಾರಿಗಳು ಸೇರಿದಂತೆ ಸಚಿವರಿಗೂ ಮನವಿ ಸಲ್ಲಿಸಲಾಗಿತ್ತು. ಸದ್ಯ ಎಲ್ಲವೂ ಮುಕ್ತಾಯ ಹಂತಕ್ಕೆ ಬಂದಿದ್ದು, ಚಾಮರಾಜನಗರ-ಮೈಸೂರು ಕಡೆ ಸಂಚಾರಿಸುವವರಿಗೆ ಇನ್ಮುಂದೆ ರೈಲು ಗೇಟ್ ಕಾಯುವ ತಲೆ ನೋವು ಇರುವುದಿಲ್ಲ.
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…