ಮೈಸೂರು: ನಂಜನಗೂಡಿನ ಸುಜಾತಪುರಂ ಬಳಿಯ ರೈಲ್ವೇ ಮೇಲ್ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಲೋಡ್ ಟೆಸ್ಟ್ ಬಳಿಕ ಸದ್ಯದಲ್ಲೇ ಸಂಚಾರಕ್ಕೆ ಮುಕ್ತವಾಗಲಿದೆ.
ಆ ಮೂಲಕ ದಶಕಗಳ ಬೇಡಿಕೆಗಳಿಗೆ ಈಗ ಪ್ರತಿಫಲ ದೊರೆಯಲಿದೆ. ದಕ್ಷಿಣ ಕಾಶಿ ನಂಜನಗೂಡಿಗೆ ಬರುವ ಭಕ್ತರು, ಪ್ರವಾಸಿಗರು ಹಾಗೂ ಅಂತರರಾಜ್ಯ ಪ್ರಯಾಣಿಕರು ಈ ಹಾದಿಯಿಂದ ಸುಗಮ ಸಂಚಾರ ದೊರೆಲಿದೆ.
ಮೈಸೂರು-ಚಾಮರಾಜನಗರ ನಡುವೆ ರೈಲುಗಳ ಸಂಖ್ಯೆ ಹೆಚ್ಚಾಗಿದ್ದು, ನಂಜನಗೂಡಿನ ಸುಜಾತಪುರಂ ರೈಲ್ವೇ ಗೇಟ್ ಬಳಿ ವಾಹನಗಳು ನಿಲ್ಲುತ್ತಿದ್ದರಿಂದ ಹೆದ್ದಾರಿಯಲ್ಲಿನ ಸಂಚಾರಕ್ಕೂ ಅಡ್ಡಿಯಾಗುತ್ತಿತ್ತು. ಜತೆಗೆ ಪದೇಪದೆ ಗೇಟ್ ಹಾಕುತ್ತಿದ್ದರಿಂದ ಸವಾರರು ರೋಸಿದ್ದರು. ಹಾಗಾಗಿ ದಶಕಗಳಿಂದ ಮೇಲ್ಸೇತುವೆಗಾಗಿ ಸಾಕಷ್ಟು ಪ್ರತಿಭಟನೆಗಳು ನಡೆದಿದ್ದವು. ಸ್ಥಳೀಯ ಜನಪ್ರತಿನಿಧಿ, ಅಧಿಕಾರಿಗಳು ಸೇರಿದಂತೆ ಸಚಿವರಿಗೂ ಮನವಿ ಸಲ್ಲಿಸಲಾಗಿತ್ತು. ಸದ್ಯ ಎಲ್ಲವೂ ಮುಕ್ತಾಯ ಹಂತಕ್ಕೆ ಬಂದಿದ್ದು, ಚಾಮರಾಜನಗರ-ಮೈಸೂರು ಕಡೆ ಸಂಚಾರಿಸುವವರಿಗೆ ಇನ್ಮುಂದೆ ರೈಲು ಗೇಟ್ ಕಾಯುವ ತಲೆ ನೋವು ಇರುವುದಿಲ್ಲ.
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…
ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…
ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…
ರಾಜ್ಯದಲ್ಲಿ ಕ್ರಿಕೆಟ್ ಗೀಳಿನ ಅಬ್ಬರದಲ್ಲಿ ಫುಟ್ಬಾಲ್ ಕ್ರೀಡೆ ಧೂಳೀಪಟ ವಾಗುತ್ತಿರುವುದು ಅತ್ಯಂತ ಆಘಾತಕಾರಿ. ಶೇ. ೯೦ ಕ್ಕೂ ಹೆಚ್ಚು ಫುಟ್ಬಾಲ್…
ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ: ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…
ಡಾ.ರಹಮತ್ ತರೀಕೆರೆ ಕರ್ನಾಟಕದಲ್ಲಿ ಗಾಂಧಿಗೆ ಸಂಬಂಧಿಸಿದಂತೆ ಪರಸ್ಪರ ವಿರುದ್ಧವೆನಿಸುವ ವಿದ್ಯಮಾನಗಳು ಜರುಗುತ್ತಿವೆ. ಉದಾ ಹರಣೆಗೆ- ೧. ಗಾಂಧಿ ಹಂತಕ ಗೋಡ್ಸೆ ಮತ್ತು…