ಮೈಸೂರು

ನಂಜನಗೂಡು | ರೈತನ ಮೇಲೆ ಚಿರತೆ ದಾಳಿ

ನಂಜನಗೂಡು: ಜಮೀನಿನಲ್ಲಿದ್ದ ರೈತನ ಮೇಲೆ ಚಿರತೆಯೊಂದು ದಾಳಿ ಮಾಡಿ, ನಂತರ ಮೇಕೆಯನ್ನು ಕೊಂದು ಹಾಕಿರುವ ಘಟನೆ ತಾಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.

ದಾಳಿಯಿಂದ ಗ್ರಾಮದ ಮಹದೇವಯ್ಯ ಗಾಯಗೊಂಡಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಆದರೆ ಇದೇ ವೇಳೆ ಪಕ್ಕದಲ್ಲೇ ಮೇಯುತ್ತಿದ್ದ ಮೇಕೆ ಮೇಲೆ ದಾಳಿ ಮಾಡಿ ಕೊಂದು ಹಾಕಿದೆ.

ಮಹದೇವಯ್ಯ ತಮ್ಮ ಜಮೀನಿನಲ್ಲಿ ಮೇಕೆ ಮೇಯಿಸುತ್ತಿರುವ ವೇಳೆ ಏಕಾಏಕಿ ಚಿರತೆ ಅವರ ಮೇಲೆ ದಾಳಿ ನಡೆಸಿದೆ. ಈ ವೇಳೆ ಕೆಳಗೆ ಬಿದ್ದು ಚಿರತೆಯಿಂದ ತಪ್ಪಿಸಿಕೊಂಡ ಅವರಿಗೆ ಕೈಯಲ್ಲಿ ಸಣ್ಣ ಗಾಯವಾಗಿದೆ. ಬಳಿಕ ಚಿರತೆ ಪಕ್ಕದಲ್ಲೆ ಇದ್ದ ಮೇಕೆ ಮೇಲೆ ದಾಳಿ ನಡೆಸಿ ಮೇಕೆಯನ್ನು ಕೊಂದು ಹಾಕಿ ಎಳೆದೊಯ್ಯುವ ಸಮಯ ಜನರು ಕೂಗಿದ ಬಳಿಕ ಮೇಕೆ ದೇಹವನ್ನು ಅಲ್ಲೆ ಬಿಟ್ಟು ಹೋಗಿದೆ. ಬಳಿಕ ಸಂಜೆ ವೇಳೆಗೆ ನಾಯಿ ಮೇಲೆಯೂ ದಾಳಿ ನಡೆಸಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಬೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಇಷ್ಟರಲ್ಲೇ ಬೋನು ಇರಿಸಿ ಚಿರತೆ ಸೆರೆಗೆ ಕ್ರಮ ಕೈಗೊಳ್ಳುವುದಾಗಿ ಜೊತೆಗೆ ರೈತನಿಗೆ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.

ಗ್ರಾಮದಲ್ಲಿ ಈವರೆಗೂ 20ಮೇಕೆಗಳು ಚಿರತೆ ದಾಳಿಗೆ ಒಳಗಾಗಿದ್ದು, ಅರಣ್ಯ ಅಧಿಕಾರಿಗಳು ಕೂಡಲೇ ಹೆಚ್ಚು ಬೋನ್‌ ತರಿಸಿ ಹಾವಳಿ ಹೆಚ್ಚಿರುವ ಕಡೆಗಳಲ್ಲಿ ಇರಿಸಬೇಕು. ದಾಳಿ ನಡೆಸಿರುವ ಹಿನ್ನೆಲೆ ಜನರಲ್ಲಿ ಭೀತಿ ಹೆಚ್ಚಾಗಿದೆ. ಇಲಾಖೆ ತ್ವರಿತ ಕ್ರಮಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಲೆ | ಶವವನ್ನು ಪಾಳು ಮನೆ ಮುಂದೆ ಎಸೆದು ಹೋದ ದುಷ್ಕರ್ಮಿ

ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…

2 hours ago

ಟಿ-20 ವಿಶ್ವಕಪ್‌ : ಇಟಲಿ ಮಣಿಸಿ ದಾಖಲೆ ಬರೆದ ಸ್ಕಾಟ್ಲೆಂಡ್‌

ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…

2 hours ago

ಈ ಊರಲ್ಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದೆ ಬೀಳುತ್ತೆ 30 ಸಾವಿರ ದಂಡ

ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…

3 hours ago

2027 ಸೆ.3ಕ್ಕೆ ಅಟ್ಲಾಂಟಾದಲ್ಲಿ 9ನೇ ನಾವಿಕ ವಿಶ್ವ ಸಮ್ಮೇಳನ

ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…

3 hours ago

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ ; ₹11,887 ಕೋಟಿ ಹೂಡಿಕೆ

ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…

3 hours ago

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

5 hours ago