ನಂಜನಗೂಡು: ಜಮೀನಿನಲ್ಲಿದ್ದ ರೈತನ ಮೇಲೆ ಚಿರತೆಯೊಂದು ದಾಳಿ ಮಾಡಿ, ನಂತರ ಮೇಕೆಯನ್ನು ಕೊಂದು ಹಾಕಿರುವ ಘಟನೆ ತಾಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.
ದಾಳಿಯಿಂದ ಗ್ರಾಮದ ಮಹದೇವಯ್ಯ ಗಾಯಗೊಂಡಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಆದರೆ ಇದೇ ವೇಳೆ ಪಕ್ಕದಲ್ಲೇ ಮೇಯುತ್ತಿದ್ದ ಮೇಕೆ ಮೇಲೆ ದಾಳಿ ಮಾಡಿ ಕೊಂದು ಹಾಕಿದೆ.
ಮಹದೇವಯ್ಯ ತಮ್ಮ ಜಮೀನಿನಲ್ಲಿ ಮೇಕೆ ಮೇಯಿಸುತ್ತಿರುವ ವೇಳೆ ಏಕಾಏಕಿ ಚಿರತೆ ಅವರ ಮೇಲೆ ದಾಳಿ ನಡೆಸಿದೆ. ಈ ವೇಳೆ ಕೆಳಗೆ ಬಿದ್ದು ಚಿರತೆಯಿಂದ ತಪ್ಪಿಸಿಕೊಂಡ ಅವರಿಗೆ ಕೈಯಲ್ಲಿ ಸಣ್ಣ ಗಾಯವಾಗಿದೆ. ಬಳಿಕ ಚಿರತೆ ಪಕ್ಕದಲ್ಲೆ ಇದ್ದ ಮೇಕೆ ಮೇಲೆ ದಾಳಿ ನಡೆಸಿ ಮೇಕೆಯನ್ನು ಕೊಂದು ಹಾಕಿ ಎಳೆದೊಯ್ಯುವ ಸಮಯ ಜನರು ಕೂಗಿದ ಬಳಿಕ ಮೇಕೆ ದೇಹವನ್ನು ಅಲ್ಲೆ ಬಿಟ್ಟು ಹೋಗಿದೆ. ಬಳಿಕ ಸಂಜೆ ವೇಳೆಗೆ ನಾಯಿ ಮೇಲೆಯೂ ದಾಳಿ ನಡೆಸಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಬೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಇಷ್ಟರಲ್ಲೇ ಬೋನು ಇರಿಸಿ ಚಿರತೆ ಸೆರೆಗೆ ಕ್ರಮ ಕೈಗೊಳ್ಳುವುದಾಗಿ ಜೊತೆಗೆ ರೈತನಿಗೆ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.
ಗ್ರಾಮದಲ್ಲಿ ಈವರೆಗೂ 20ಮೇಕೆಗಳು ಚಿರತೆ ದಾಳಿಗೆ ಒಳಗಾಗಿದ್ದು, ಅರಣ್ಯ ಅಧಿಕಾರಿಗಳು ಕೂಡಲೇ ಹೆಚ್ಚು ಬೋನ್ ತರಿಸಿ ಹಾವಳಿ ಹೆಚ್ಚಿರುವ ಕಡೆಗಳಲ್ಲಿ ಇರಿಸಬೇಕು. ದಾಳಿ ನಡೆಸಿರುವ ಹಿನ್ನೆಲೆ ಜನರಲ್ಲಿ ಭೀತಿ ಹೆಚ್ಚಾಗಿದೆ. ಇಲಾಖೆ ತ್ವರಿತ ಕ್ರಮಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದರು.
ಚಾಮರಾಜನಗರ : ಜಿಲ್ಲೆಯ ನಂಜೇದೇವನಪುರ ಗ್ರಾಮದ ಕಲ್ಲು ಕ್ವಾರಿಯೊಂದರಲ್ಲಿ 5 ಹುಲಿಗಳ ಇರುವಿಕೆ ಡ್ರೋಣ್ನಲ್ಲಿ ಸೆರೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ…
ಮೈಸೂರು : ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಸೋಮವಾರ ನಗರದಲ್ಲಿ…
ಬೆಂಗಳೂರು : ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲು…
ವೆಲ್ಲಿಂಗ್ಟನ್ : ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಅಂತಿಮವಾಗಿದೆ ಎಂದು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಸೋಮವಾರ ಹೇಳಿದ್ದಾರೆ.…
ಮೈಸೂರು : ಸಂಸ್ಕೃತ ಗ್ರಂಥ, ಶಾಸ್ತ್ರ ಗ್ರಂಥ, ವೇದಾಂತ ವಿಚಾರದ ಗ್ರಂಥಗಳನ್ನು ಅಧ್ಯಯನ ಮಾಡಿದರೆ ಜೀವನ ಸಾರ್ಥಕಗೊಳ್ಳಲಿದೆ ಎಂದು ಶೃಂಗೇರಿ…
ಮೈಸೂರು : ನವೀಕರಿಸಬಹುದಾದ ಇಂಧನ ಬಳಕೆಯನ್ನು ಉತ್ತೇಜಿಸುವ ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಬೆಳೆಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್…